January 28, 2026

Newsnap Kannada

The World at your finger tips!

lovers

ಕೆ ಆರ್ ಎಸ್ ಹಿನ್ನೀರಿಗೆ ಹಾರಿ ಮೈಸೂರಿನ ಯುವ ಪ್ರೇಮಿಗಳ ಆತ್ಮಹತ್ಯೆ

Spread the love

ಮೈಸೂರಿನ ಯುವ ಪ್ರೇಮಿಗಳಿಬ್ಬರು ಕೆ ಆರ್ ಎಸ್ ಹಿನ್ನೀರಿನಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್‍ನ ನಾರ್ತ್ ಬ್ಯಾಂಕ್ ಬಳಿಯ ಜರುಗಿದೆ.

ನವೀನ್(20) ಮತ್ತು ನಿಸರ್ಗ (19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.

ಮೈಸೂರಿನ ಮೇಟಗಳ್ಳಿ ನಿವಾಸಿಗಳು. ಪರಸ್ಪರ ಸಂಬಂಧಿಕರಾಗಿರುವ ನಿಸರ್ಗ ಮತ್ತು ನವೀನ್ ಹಲವು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು.

ನವೆಂಬರ್ 20 ರಂದು ನಿಸರ್ಗಗೆ ಬೇರೆ ಯುವಕನ ಜೊತೆ ಮದುವೆ ಮಾಡಲಾಗಿತ್ತು. ಡಿಸೆಂಬರ್ 1 ರ ಮಧ್ಯಾಹ್ನದಿಂದ ಇಬ್ಬರೂ ಮನೆಯಿಂದ ನಾಪತ್ತೆಯಾಗಿದ್ದರು.

ಕೆ.ಆರ್.ಎಸ್ ನ ನಾರ್ತ್ ಬ್ಯಾಂಕ್ ನ ಮಿಲ್ಟ್ರಿ ಕ್ಯಾಂಪ್ ಬಳಿ ಹಿನ್ನೀರಿನಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ.
ವೆಲ್ ನಿಂದ ಇಬ್ಬರು ಕೈಕಟ್ಟಿಕೊಂಡು ಹಿನ್ನಿರಿಗೆ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೆಆರ್‍ಎಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!