ಮಗಳ ತಿಂಗಳ ತಿಥಿ ಮಾಡಲು ಬಂದಿದ್ದ ಅಪ್ಪ, ಅಳಿಯನ ಮನೆಯ ಎದುರೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಮಾಳೆಗೆರೆ ಗ್ರಾಮದಲ್ಲಿ ನಡೆದಿದೆ.
ದೊಡ್ಡಗದ್ದವಳ್ಳಿ ಗ್ರಾಮದ ನಾಗರಾಜ್ (55) ಮೃತ ವ್ಯಕ್ತಿ.
ಮೃತರ ಪುತ್ರಿ ಹೇಮಶ್ರೀ ಅ.30 ರಂದು ಸಾವನ್ನಪ್ಪಿದ್ದರು. ಮಗಳ ತಿಂಗಳ ತಿಥಿ ಕಾರ್ಯ ಮಾಡಲು ನಾಗರಾಜ್ ನಿನ್ನೆ ಮಾಳೆಗೆರೆ ಗ್ರಾಮಕ್ಕೆ ಆಗಮಿಸಿದ್ದರು.
ಆದರೆ ಅಳಿಯ ಪ್ರವೀಣ್ ಹಾಗೂ ಕುಟುಂಬಸ್ಥರು ಮನೆಗೆ ಬೀಗ ಹಾಕಿ ತೆಳಿದ್ದರು. ಮಗಳ ತಿಥಿ ಕಾರ್ಯಕ್ಕೆ ಮಾಡಲು ಬೆಳಗ್ಗೆಯಿಂದ ಕಾದರು ಯಾರು ಬಾರದ ಹಿನ್ನೆಲೆಯಲ್ಲಿ, ಮನೆಯ ಬಾಗಿಲ ಬಳಿಯೇ ಎಡೆ ಇಟ್ಟಿರೋ ನಾಗರಾಜ್, ಬಳಿಕ ಮನನೊಂದು ಮೊಬೈಲ್ನಲ್ಲಿ ವಿಡಿಯೋ ಮಾಡಿ ನಂತರ ಆತ್ಮಹತ್ಯೆಗೆ ಶರಣಾಗಿದ್ದಾರೆ
ನನ್ನ ಮಗಳ ಸಾವಿಗೆ ಪತಿ ಪ್ರವೀಣ್, ಅತ್ತೆ ಭದ್ರಮ್ಮ ಹಾಗೂ ಸೋಮಣ್ಣ ಎಂಬವರೇ ಕಾರಣ, ಮಗಳಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ. ದಯಮಾಡಿ ಅವರನ್ನು ಸಾಯುವವರೆಗೂ ಜೈಲಿಗೆ ಹಾಕಿ ಎಂದು ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅರೇಹಳ್ಳಿ ಪೋಲಿಸರು ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿರುವ ಕುಟುಂಬಸ್ಥರಿಗೆ ಹುಡುಕಾಟ ಮಾಡುತ್ತಿದ್ದಾರೆ.
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
- ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ