ಮಂಗಳೂರಿನ ಮಾರ್ಗನ್ಸ್ ಗೇಟ್ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ತಿರುವು ಸಿಕ್ಕಿದೆ.
ಈ ಸಾಮೂಹಿಕ ಆತ್ಮಹತ್ಯೆಗೆ ಮತಾಂತರ ಯತ್ನವೇ ಕಾರಣ ಎಂದು ಮಂಗಳೂರು ಪೊಲೀಸರ ತನಿಖೆಯಿಂದ ಗೊತ್ತಾಗಿದೆ
ಮಂಗಳೂರಿನ ಮಾರ್ಗನ್ಸ್ ಗೇಟ್ನಲ್ಲಿ ಒಂದೇ ಕುಟುಂಬದ ನಾಗೇಶ್ ಶೇರಿಗುಪ್ಪಿ(30), ಪತ್ನಿ ವಿಜಯಲಕ್ಷ್ಮಿ(26), ಮಕ್ಕಳಾದ ಸಪ್ನಾ(8) ಮತ್ತು ಸಮರ್ಥ್(4) ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಸ್ಮರಿಸಬಹುದು.
ಆತ್ಮಹತ್ಯೆಗೆ ನಿಜ ಕಾರಣವೇನು?:
ವಿಜಯಲಕ್ಷ್ಮಿ ಎಂಬಾಕೆ ಮುಸ್ಲಿಂ ಮಹಿಳೆ ನೂರ್ ಜಹಾನ್ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ನೂರ್ ಜಹಾನ್ ಮಂಗಳೂರಿನಲ್ಲಿ ಮದುವೆ ಬ್ರೋಕರ್ ಆಗದ್ದಾರೆ.

ವಿಜಯಲಕ್ಷ್ಮಿ ಮತ್ತು ಆಕೆಯ ಪತಿ ನಾಗೇಶ್ ನಡುವಿನ ಆಗಾಗ್ಗೆ ಜಗಳವನ್ನು ನಡೆಯುವುದನ್ನೇ ಉಪಯೋಗ ತೆಗೆದುಕೊಂಡ ಈಕೆ ನೀನು ನಿನ್ನ ಗಂಡನಿಗೆ ವಿಚ್ಛೇದನ ಕೊಟ್ಟು ನಮ್ಮ ಧರ್ಮಕ್ಕೆ ಮತಾಂತರವಾಗು, ನಂತರ ನಮ್ಮ ಧರ್ಮದಲ್ಲೇ ಒಂದು ಹುಡುಗನನ್ನು ನೋಡಿ ಮದುವೆ ಮಾಡಿಸುತ್ತೇನೆ ಎಂದು ಪುಸಲಾಯಿಸಿದ್ದಾರೆ.
ಪ್ರತಿದಿನ ಕುಡಿದು ಬರುತ್ತಿದ್ದ ಪತಿ ಜೊತೆಗಿನ ಜಗಳದಿಂದ ರೋಸಿ ಹೋಗಿದ್ದ ವಿಜಯಲಕ್ಷ್ಮೀ, ನೂರ್ ಜಹಾನ್ ಮಾತಿಗೆ ಸಮ್ಮತಿಸಿದ್ದರು
ವಿಜಯಲಕ್ಷ್ಮಿಗೆ ಗಂಡು ಹುಡುಕುವ ಕೆಲಸವನ್ನು ನೂರ್ ಜಹಾನ್ ಆರಂಭಿಸಿದ್ದರು. ನಾಗೇಶ್ಗೆ ಈ ವಿಚಾರ ತಿಳಿದು, ವಿಜಯಲಕ್ಷ್ಮಿ ಜೊತೆಗೆ ಗಲಾಟೆ ಮಾಡಿದ್ದಾನೆ. ಈ ವೇಳೆ ಮಕ್ಕಳು ಮತ್ತು ಪತ್ನಿಯನ್ನು ಕೊಂದು ನಾಗೇಶ್ ತಾನು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮಂಗಳೂರು ಪೊಲೀಸರು ನೂರ್ ಜಾನ್ ನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ