ವಿವಾಹಿತ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಗಡಿ ತಾಲೂಕಿನ ಗ್ರಾಮ ದಾಸೇಗೌಡನಪಾಳ್ಯದಲ್ಲಿ ನಡೆದಿದೆ.
ಶ್ರೀನಿವಾಸ್(35), ಪುಷ್ಪಲತಾ(32) ಮೃತ ದುರ್ದೈವಿಗಳು.
ಮೃತರಿಬ್ಬರಿಗೂ ಬೇರೆ ಬೇರೆ ಮದುವೆಯಾಗಿತ್ತು. ಆ ಬಳಿಕ ಕೆಲ ಸಮಯ ದೂರವಾಗಿದ್ದರು. ಆದರೆ ಇತ್ತೀಚೆಗೆ ಇಬ್ಬರು ಸಹ ಒಟ್ಟಿಗೆ ವಾಸ ಮಾಡಲು ಆರಂಭಿಸಿದ್ದರು ಎನ್ನಲಾಗಿದೆ.
ನಿನ್ನೆ ಇಬ್ಬರ ನಡುವೆ ಮಾತುಕತೆ ನಡೆದಿದೆ ಈ ವೇಳೆ ಸಮಾಧಾನಗೊಂಡಿದ್ದ ಪುಷ್ಪಲತಾ ಮೊದಲು ನೇಣಿಗೆ ಶರಣಾಗಿದ್ದಳಂತೆ.
ಆ ಬಳಿಕ ಆಕೆಯ ಮೃತದೇಹವನ್ನು ಕಂಡ ಶ್ರೀನಿವಾಸ್ ಆಕೆಯ ಮೃತದೇಹ ಕೆಳಗೆ ಇಳಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಸ್ಥಳಕ್ಕೆ ಕುದೂರು ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ