ರಮೇಶ್ ಜಾರಕಿಹೊಳಿ CD ಕೇಸ್; ಸದನದಲ್ಲಿ ​ನಿಲುವಳಿ ಸೂಚನೆ ಮಂಡನೆಗೆ ಕಾಂಗ್ರೆಸ್ ಸಿದ್ಧತೆ?

Team Newsnap
1 Min Read

ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಸಿಡಿ ಕೇಸ್ ತನಿಖೆಯ ಪ್ರಗತಿ ಬಗ್ಗೆ ಕಾಂಗ್ರೆಸ್ ಮಾಹಿತಿ ಕೇಳಿದೆ.

ಶುಕ್ರವಾರ ಇದೇ ವಿಚಾರವಾಗಿ ಸದನದ ಕಲಾಪದಲ್ಲಿ ನಿಲುವಳಿ ಸೂಚನೆಯನ್ನು ಮಂಡಿಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ.

ಈ ಹಿನ್ನೆಲೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಸಚಿವ ಡಾ ಕೆ. ಸುಧಾಕರ್, ನಿಲುವಳಿ ಸೂಚನೆ ಮಂಡನೆ ಮಾಡದಂತೆ ಮನವಿ ಮಾಡಿದ್ದಾರೆ.

ಈ ವಿಚಾರವಾಗಿ ವಿಪಕ್ಷದ ಮನವೊಲಿಸಲು ಸಚಿವ ಸುಧಾಕರ್​​ಗೆ ಜವಾಬ್ದಾರಿ ನೀಡಲಾಗಿದೆ.
ಅದರಂತೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಕರೆ ಮಾಡಿರುವ ಡಾ.ಕೆ ಸುಧಾಕರ್, ನಿಲುವಳಿ ಸೂಚನೆ ಮಂಡನೆ ಮಾಡದಂತೆ ಮನವಿ ಮಾಡಿಕೊಂಡಿದ್ದಾರೆ. ಈ ಮೂಲಕ ಪರೋಕ್ಷವಾಗಿ ಸರ್ಕಾರದ ಪರವಾಗಿ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Share This Article
Leave a comment