February 22, 2026

Newsnap Kannada

The World at your finger tips!

SHIVASENE

ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ದಾಳಿ – ಶಿವಸೇನೆ ಕಾರ್ಯಕರ್ತರ ದುಷ್ಕೃತ್ಯ

Spread the love

ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯ ಎಲ್ಲೆ ಮೀರಿದೆ.

ಶಿವಸೇನೆಯ ಪುಂಡರು, ಸಾಂಗ್ಲಿ ಜಿಲ್ಲೆಯ ಮೀರಜ ಪಟ್ಟಣದಲ್ಲಿ ಕನ್ನಡಿಗರ ವಾಹನ ಮತ್ತು ಅಂಗಡಿಗಳ ಮೇಲೆ ಮನಸೋ ಇಚ್ಛೆ ದಾಳಿ ಮಾಡಿದ್ದಾರೆ.

ಬೆಂಗಳೂರಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಅಪಮಾನ ಮಾಡಿದ ಆರೋಪದ ಮೇಲೆ ಕನ್ನಡಿಗರ ವಿರುದ್ಧ ಶಿವಸೇನೆ ಕಾರ್ಯಕರ್ತರು ಪುಂಡಾಟ ಮೆರೆಯುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಮಿರಜ್ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಶಿವಸೇನೆ ಕಾರ್ಯಕರ್ತರ ದಾಳಿಯಿಂದಾಗಿ ಐವರಿಗೆ ಗಾಯವಾಗಿದೆ.

ವಾಹನಗಳು ಜಖಂಗೊಂಡಿವೆ. ಅಂಗಡಿಗಳು ಹಾನಿಗೊಳಗಾಗಿವೆ. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

error: Content is protected !!