ವಿಷ ಸೇವಿಸಿ ಇಬ್ಬರು ಮಕ್ಕಳ ಸಮೇತ ದಂಪತಿ ಆತ್ಮಹತ್ಯೆಗೆ ಯತ್ನ; ಪುತ್ರ ಸಾವು

Team Newsnap
0 Min Read

ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಂತಾಮಣಿ ತಾಲೂಕಿನ‌ ನಾರಾಯಣಹಳ್ಳಿ ಗ್ರಾಮದಲ್ಲಿ ನಡೆದಿದೆ.

ಈ ಪೈಕಿ ಓರ್ವ ಸಾವನ್ನಪ್ಪಿದ್ದಾನೆ ಮೂವರು ಬದುಕುಳಿದಿದ್ದಾರೆ.

ಅಂಬಾಜಿ ದುರ್ಗ ಹೋಬಳಿಯ ನಾರಾಯಣಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ದಂಪತಿ ಗಳು ಮಕ್ಕಳೊಡನೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಮುರಳಿ(14) ಸಾವನ್ನಪ್ಪಿದ್ದಾರೆ ಮೂವರು ಅದೃಷ್ಟವಶಾತ್​ ಬದುಕುಳಿದಿದ್ದಾರೆ.

ಮಂಜುನಾಥ್ (45) ಹನುಮಕ್ಕ (35 )ಮನಿರಾಜು (20 ) ಅವ್ರನ್ನ ಅಕ್ಕಪಕ್ಕದ ಮನೆಯವರು ಕೋಲಾರದ ಎಸ್.ಎನ್.ಆರ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಮುವರ ಸ್ಥಿತಿಯೂ ಗಂಭೀರವಾಗಿದೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a comment