ಸಂಕ್ರಾಂತಿ ವೇಳೆಗೆ ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ: ಸಿಎಂ ಬೊಮ್ಮಾಯಿ ಬದಲಾವಣೆ

Team Newsnap
1 Min Read
Bommai sets stage for JDS-BJP alliance during 'Loka' elections 'ಲೋಕಾ 'ಚುನಾವಣೆ ವೇಳೆಗೆ ಜೆಡಿಎಸ್ - ಬಿಜೆಪಿ ಮೈತ್ರಿಗೆ ವೇದಿಕೆ ಸಜ್ಜು - ಬೊಮ್ಮಾಯಿ

ಸಂಕ್ರಾಂತಿ ಬಳಿಕ ಮುಂಬರುವ ಚುನಾವಣೆ ಗುರಿಯಾಗಿಸಿಕೊಂಡು ಗುಜರಾತ್‌ ಮಾದರಿಯಂತೆ ರಾಜ್ಯ‍ ಸಚಿವ ಸಂಪುಟಕ್ಕೆ ಮೇಜರ್‌ ಸರ್ಜರಿ ಮಾಡುವ ಸಾಧ್ಯತೆ ಇದೆ

ಈ ಬಗ್ಗೆ ಬಿಜೆಪಿ ಪಾಳೆಯದಲ್ಲಿ ಗಂಭೀರ ಚರ್ಚೆ ಅರಂಭವಾಗಿದೆ. ಪಕ್ಷದ ವರಿಷ್ಠರು ರಾಜ್ಯ ನಾಯಕರನ್ನು ಕರೆಸಿಕೊಂಡು ಮಾತುಕತೆ ನಡೆಸುವ ಸಾಧ್ಯತೆಯೂ ಇದೆ.

ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬದಲಿಸಿ ಬೇರೊಬ್ಬರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಸಾಧ್ಯತೆ ಬಗ್ಗೆಯೂ ಸ್ಪಷ್ಟಚಿತ್ರಣ ಹೊರಬೀಳಲಿದೆ ಎಂದು ಹೇಳಲಾಗಿದೆ

ಗುಜರಾತ್‌ ಮಾದರಿಯಲ್ಲಿ ಕರ್ನಾಟಕದಲ್ಲೂ ಕೂಡ ಎಲ್ಲಾ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ಕಲ್ಪಿಸಿ , ಜಾತಿ ಸಮೀಕರಣ ಮತ್ತು ಪ್ರಾದೇಶಿಕ ಸಮತೋಲನ ಗಮನದಲ್ಲಿ ಇಟ್ಟುಕೊಂಡು ಸಂಪುಟಕ್ಕೆ ಮೇಜರ್‌ ಸರ್ಜರಿ ಮಾಡುವ ಬಗ್ಗೆ ಬಿಜೆಪಿ ವರಿಷ್ಠರು ಚಿಂತನೆ ಮಾಡುತ್ತಿದ್ದಾರೆ ಎನ್ನಲಾಗಿದೆ.

Share This Article
Leave a comment