ದೇಶದಲ್ಲಿ ಹೆಣ್ಣು ಮಕ್ಕಳ ಮದುವೆ ವಯಸ್ಸು 18 ರಿಂದ 21ಕ್ಕೆ ಏರಿಕೆ ಮಾಡಿರುವ ಕಾನೂನು ಇಡೀ ದೇಶಕ್ಕೆ ಅನ್ವಯವಾಗುತ್ತದೆ. ಕಾನೂನು ಕೇವಲ ಹಿಂದೂ ಧರ್ಮಕ್ಕೆ ಮಾತ್ರ ಅಲ್ಲ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು
ಮದುವೆ ವಯಸ್ಸು 21ಕ್ಕೆ ಏರಿಸಿರುವ ಕೇಂದ್ರ ಸರ್ಕಾರ ನಿರ್ಧಾರಕ್ಕೆ ಇತ್ತೀಚಿಗೆ ಸ್ವರ್ಣವಲ್ಲಿ ಮಠದ ಸ್ವಾಮೀಜಿ ಉಡುಪಿಯಲ್ಲಿ ವಿರೋಧ ವ್ಯಕ್ತಪಡಿಸಿದ್ದರು.
ಈ ಕುರಿತು ಪ್ರತಿಕ್ರಿಯೆ ನೀಡಿದ ಸಚಿವೆ ಮದುವೆ ವಯಸ್ಸಿಗೂ ಜನಸಂಖ್ಯೆಗೆ ಸಂಬಂಧ ಇಲ್ಲ. ವಯಸ್ಸು 21 ಆದರೆ ಯುವತಿಯ ಪದವಿ ಆಗಿರುತ್ತದೆ ಆ ವಯಸ್ಸಿಗೆ ಪ್ರಭುದ್ಧತೆ ಬಂದಿರುತ್ತದೆ. ವಯಸ್ಸು 22 ಆಗುವ ಮೊದಲು ಯಾರು ಮದುವೆ ಮಾಡಬಾರದು. ಇಡೀ ದೇಶದಲ್ಲಿ 18ನೇ ವಯಸ್ಸಿಗೆ ಮದುವೆ ಮಾಡಬಹುದು ಎಂಬ ಅಭಿಪ್ರಾಯ ತಪ್ಪು ಎಂದರು.
ಇದೀಗ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಕಾನೂನನ್ನು ದೇಶದ ಎಲ್ಲರೂ ಪಾಲನೆ ಮಾಡಬೇಕು. ತಾಯಿ ಮಗುವಿನ ಮರಣಪ್ರಮಾಣ ತಡೆಯಲು ಈ ನಿರ್ಧಾರ ಮಾಡಲಾಗಿದೆ. ವೈಜ್ಞಾನಿಕ ವರದಿ ಪರಿಶೀಲನೆ ಮಾಡಿಯೇ ಕೇಂದ್ರ ಈ ನಿರ್ಧಾರಕ್ಕೆ ಬಂದಿದೆ ಎಂದು ಮಾಹಿತಿ ಹಂಚಿಕೊಂಡರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು