ಶ್ರೀನಗರ: ಹೊಸ ವರ್ಷದ ಮೊದಲ ದಿನ ದೇವಿಯ ದರ್ಶನಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ ಶನಿವಾರ ನಸುಕಿನ ಜಾವ 12ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಈ ಘಟನೆ ಜಮ್ಮು ಕಾಶ್ಮೀರದ ಕತ್ರಾದಲ್ಲಿರುವ ಮಾತಾ ವೈಷ್ಣೋ ದೇವಿ ಭವನ್ನಲ್ಲಿ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದ ತ್ರಿಕೂಟ ಬೆಟ್ಟಗಳ ಮೇಲಿರುವ ಪ್ರಸಿದ್ಧ ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ವರ್ಷದ ಮೊದಲ ದಿನ ದೇವಿಯ ದರ್ಶನ ಪಡೆಯಲು ಅಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದ ವೇಳೆ ನೂಕುನುಗ್ಗಲು ಸಂಭವಿಸಿ ಕಾಲ್ತುಳಿತ ಸಂಭವಿಸಿದೆ
ಸ್ಥಳಕ್ಕೆ ಹಿರಿಯ ಅಧಿಕಾರಿಗಳು, ಪೊಲೀಸರು ದೌಡಾಯಿಸಿದ್ದಾರೆ ಗಾಯಗೊಂಡವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸುವ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರ ಕೆಲವರ ಸ್ಥಿತಿ ಗಂಭೀರವಾಗಿದೆ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ಗಾಯಗೊಂಡರವನ್ನು ಸ್ಥಳೀಯ ನಾರೈನಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು. ಸದ್ಯ ಯಾತ್ರೆಗೆ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂಬ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ.
- ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಆಹ್ವಾನಬೆಂಗಳೂರು
- ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆಯ ಮುನ್ಸೂಚನೆ
- ಕ್ಯಾಂಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ದುರ್ಮರಣ
- ರಾಜ್ಯ ಸರ್ಕಾರದಿಂದ 318 ಪಿಡಿಒ ಅಮಾನತು
- ಬಿಜೆಪಿ ಕಾರ್ಯಕರ್ತರಿಂದ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India