ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ 2021 ರ ವರ್ಷದಲ್ಲಿ 833 ಕೋಟಿ ರೂಪಾಯಿ ಸಂಗ್ರಹವಾಗಿದೆ.
ತಿರುಪತಿ ದೇವಾಲಯದ (ಟಿಟಿಡಿ) ಮಂಡಳಿಯು ನಡೆಸಿದ ಹುಂಡಿ ಎಣಿಕೆಯಲ್ಲಿ 2021ರ ಜನವರಿ 1 ರಿಂದ ಡಿಸೆಂಬರ್ 30ರವರೆಗೂ 833 ಕೋಟಿ ರೂ. ಸಂಗ್ರಹವಾಗಿದೆ.
ಕೊರೊನಾ ಎರಡನೇ ಅಲೆಯ ನಂತರ ಈ ವರ್ಷದಲ್ಲಿ ಸುಮಾರು 1.4 ಕೋಟಿ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ದೇವಾಲಯ ಆಡಳಿತ ಮಂಡಳಿಯು 5.96 ಕೋಟಿ ಲಡ್ಡು ಪ್ರಸಾದವನ್ನು ಭಕ್ತರಿಗೆ ನೀಡಿದೆ ಮತ್ತು ಸುಮಾರು 1.37 ಕೋಟಿ ಭಕ್ತರಿಗೆ ಅನ್ನ ಸಂತರ್ಪಣೆ ಮಾಡಲಾಗಿದೆ. ದೇವಾಲಯಕ್ಕೆ ಭೇಟಿ ನೀಡಿದ 1.4 ಕೋಟಿ ಭಕ್ತರಲ್ಲಿ 48.75 ಲಕ್ಷ ಮಂದಿ ದೇವರಿಗೆ ಮುಡಿ ನೀಡಿದ್ದಾರೆ.
ಕೊರೊನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ಬ್ರಹ್ಮರಥೋತ್ಸವಕ್ಕೆ ಭಕ್ತರಿಗೆ ನಿಷೇಧ ಹೇರಲಾಗಿದೆ.
- ರೈಲ್ವೇ ಇಲಾಖೆ : 14,298 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪುನಾರಂಭ
- ಅಕ್ಕಿಯ ಬೆಲೆಯಲ್ಲಿ ಭಾರೀ ಏರಿಕೆಗೆ
- ‘ಒಂದು ದೇಶ, ಒಂದು ಚುನಾವಣೆ’ಗಾಗಿ ಕೇಂದ್ರ ಸರ್ಕಾರ 3 ಮಸೂದೆಗಳನ್ನು ಮಂಡಿಸಲು ಸಿದ್ಧ
- KSRTC ಬಸ್ ಕಂಟೈನರ್ ಗೆ ಡಿಕ್ಕಿಯಾಗಿ 20 ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ
- ಕೆಲಸದ ಒತ್ತಡದಿಂದಾಗಿ ವ್ಯಕ್ತಿ ಆತ್ಮಹತ್ಯೆಗೆ ಶರಣು
- ಮುಡಾ ಹಗರಣ : ಇಂದಿನಿಂದ ಸಿಎಂ ವಿರುದ್ಧ ತನಿಖೆ ಆರಂಭ