ಸಂಕ್ರಾಂತಿ ನಂತರ ಸಿಎಂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರದ ಸಚಿವ ಸಂಪುಟ ಪುನಾರಚನೆ ಆಗುವ ಸಾಧ್ಯತೆ ಇದೆ.
ಮೂಲ ಮತ್ತು ವಲಸಿಗ ಸಚಿವರಿಗೆ ಕೊಕ್ ನೀಡಲು ಹೈಕಮಾಂಡ್ ನಿರ್ಧರಿಸಿದೆ . ಸಚಿವರ ಕಾರ್ಯವೈಖರಿ, ಕ್ರಿಯಾಶೀಲತೆಯನ್ನು ಮಾನದಂಡವಾಗಿ ಇಟ್ಟುಕೊಂಡು ಸಚಿವರಿಗೆ ಗೇಟ್ ಪಾಸ್ ನೀಡುವ ಬಗ್ಗೆ ಚರ್ಚೆಯಾಗುತ್ತದೆ.
ಜನವರಿ 8, 9 ರಂದು ಹೈಕಮಾಂಡ್ ಸಭೆ ನಡೆಸಲಿದೆ , ಸಭೆ ಬಳಿಕ ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ
6+4 ಸೂತ್ರದಡಿಯಲ್ಲಿ ಸಂಪುಟ ಪುನಾರಚನೆಯ ಯೋಜನೆ ಇದೆ. ವಲಸಿಗರಲ್ಲಿ ಮೂರು, ಮೂಲದಲ್ಲಿ ಮೂರು ಸಚಿವರು ಸಂಪುಟದಿಂದ ಹೊರ ಹೋಗಲಿದ್ದಾರೆ. ಹೊರ ಹಾಕುವ ಸಚಿವರ ಪಟ್ಟಿ ಇನ್ನೂ ಬಿಡುಗಡೆ ಆಗಿಲ್ಲ
ಸಂಪುಟದಿಂದ 6 ಸಚಿವರನ್ನು ಹೊರ ಹಾಕಿದರೆ ಒಟ್ಟು 10 ಸ್ಥಾನ ಖಾಲಿ ಉಳಿಯಲಿವೆ. ಆಗ ಎಲೆಕ್ಷನ್ ಕ್ಯಾಬಿನೆಟ್ ರಚಿಸಲು ಹೈಕಮಾಂಡ್ ಉತ್ಸುಕವಾಗಿದ್ದು, 10 ಸ್ಥಾನಗಳನ್ನು ತುಂಬಲು ಹೈಕಮಾಂಡ್ ಪ್ಲ್ಯಾನ್ ಮಾಡಿದೆ.
- ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ಗೆ ವಿಶೇಷ ಚೇತನ ಬಲಿ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ
- ಅತಿಶಿ ಮರ್ಲೆನಾ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ
- ಮುಂದಿನ ತಿಂಗಳಿಂದ ರಾಜ್ಯದ ಅಂಗನವಾಡಿ ಮಕ್ಕಳಿಗೆ ಗಟ್ಟಿಬೆಲ್ಲ ವಿತರಣೆ
- ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ