ಮೇಕೆದಾಟು ಯೋಜನೆಗೆ ಆಗ್ರಹಿಸಿ ನಮ್ಮ ಹಕ್ಕು ನೀರಿಗಾಗಿ ಎಂಬ ಘೋಷ ವಾಕ್ಯದಡಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಇನ್ನೇನು ಕೆಲವೇ ಹೊತ್ತಿನಲ್ಲಿ ಚಾಲನೆ ಸಿಗಲಿದೆ.
ವಿವಿಧ ಪೂಜಾ ಕಾರ್ಯಗಳುಇಗೂ ಮುನ್ನ ನದಿಯಲ್ಲಿ ಸ್ನಾನ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ , ಜಿಲ್ಲೆಯ ಕನಕಪುರ ತಾಲೂಕಿನ ಸಂಗಮದಲ್ಲಿ ಗಂಗಾ ಪೂಜೆ ನೆರವೇರಿಸಿದರು.
ಕೆಲವೇ ಹೊತ್ತಲ್ಲಿ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ನ ಮಹತ್ವದ 10 ದಿನಗಳ ಪಾದಯಾತ್ರೆಗೆ ಚಾಲನೆ ಸಿಗಲಿದೆ.
ಕಾಂಗ್ರೆಸ್ ಹಿರಿಯ ಶಾಸಕರು ಮತ್ತು ಚಿತ್ರರಂಗದ ಗಣ್ಯರು ಈ ಪಾದಯಾತ್ರೆಯಲ್ಲಿ ಭಾಗಿ ಆಗಲಿದ್ದಾರೆ. ಇಂದು 18
ಕಿಲೋ ಮೀಟರ್ ಪಾದಯಾತ್ರೆ ನಡೆಯಲಿದೆ.