ವೀಕೆಂಡ್ ಕರ್ಫ್ಯೂ ತೆರವುಗೊಳಿಸಿದರೂ ಬೆಂಗಳೂರಲ್ಲಿ ಮಾತ್ರ ಜ.29 ರವರೆಗೂ ಶಾಲೆಗಳನ್ನು ಬಂದ್ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟನೆ ನೀಡಿದರು.
ಸಿಎಂ ಬಸವರಾಜ್ ನೇತೃತ್ವದಲ್ಲಿ ನಡೆದ ಕೊರೊನಾ ಸಭೆ ಬಳಿಕ ಮಾತಾಡಿದ ಶಿಕ್ಷಣ ಸಚಿವ ಬಿಸಿ ನಾಗೇಶ್, 29ರ ನಂತರ ಬೆಂಗಳೂರಿನಲ್ಲಿ ಶಾಲೆ ಓಪನ್ ಮಾಡೋದರ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದರು.
ಬೆಂಗಳೂರು ಬಿಟ್ಟು ಬೇರೆ ಎಲ್ಲಾ ಕಡೆ ಅಧಿಕಾರಿಗಳ ಅಭಿಪ್ರಾಯ ಪಡೆದು ಪಾಸಿಟಿವ್ ರೇಟ್ ನೋಡಿಕೊಂಡು ಶಾಲೆ ಆರಂಭ ಮಾಡುತ್ತೇವೆ. ಬೆಂಗಳೂರಿನಲ್ಲಿ ಪಾಸಿಟಿವ್ ಜಾಸ್ತಿ ಇದೆ. ಹೀಗಾಗಿ ಮುಂದಿನ ಶುಕ್ರವಾರ ಬೆಂಗಳೂರಲ್ಲಿ ಶಾಲೆ ತೆರೆಯುವ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದರು.
ಐದು ಮಕ್ಕಳಿಗೆ ಸೋಂಕು ಬಂದ್ರೆ, ಮೂರು ದಿನ ಶಾಲೆ ಬಂದ್ ಮಾಡಲಾಗುವುದು. ಇಪ್ಪತೈದು ಮಕ್ಕಳಿಗೆ ಸೋಂಕು ಬಂದ್ರೆ ಏಳು ದಿನ ಶಾಲೆ ಬಂದ್ ಮಾಡಲಾಗುವುದು. ಇದು ಜಿಲ್ಲಾವಾರು ಶಾಲೆಗಳಿಗೆ ಅನ್ವಯಿಸುತ್ತದೆ. ಆದ್ರೆ ಬೆಂಗಳೂರು ಶಾಲೆಗಳು ಸದ್ಯಕ್ಕೆ ಆರಂಭವಿಲ್ಲ ಎಂದು ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು