ತೀವ್ರ ಕುತೂಹಲ ಮೂಡಿಸಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಇಂದಿನಿಂದ ಮೊದಲ ಹಂತದ ಮತದಾನ ಬಿರುಸಿನಿಂದ ಸಾಗಿದೆ.
ಇಂದು ಮೊದಲ ಹಂತದಲ್ಲಿ 11 ಜಿಲ್ಲೆಯ 58 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಬೆಳಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆವರೆಗೂ ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಮತದಾನ ಪ್ರಕ್ರಿಯೆಗಳು ಆರಂಭವಾಗಿವೆ.
ಮೊದಲ ಹಂತದ ಈ ಚುನಾವಣೆಯು ಪಶ್ಚಿಮ ಉತ್ತರ ಪ್ರದೇಶದಲ್ಲಿ ನಡೆಯಲಿದೆ. ಇದು ಉಳಿದ ಹಂತದ ಮತದಾನದ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ.
ಮೂರು ಕೃಷಿ ಕಾನೂನುಗಳು ಮತ್ತು ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಈ ಪ್ರದೇಶದಲ್ಲಿ ಬಿಜೆಪಿ ಕೊಂಚ ಕಷ್ಟ ಎದುರಿಸಲಿದೆ ಎಸ್ಪಿ ಮತ್ತು ಆರ್ಎಲ್ಡಿಗೆ ಪೂರಕವಾಗಿ ವಾತಾವರಣ ನಿರ್ಮಾಣವಾಗಿದೆ. ಜಾಟ್ ಮತ್ತು ಮುಸ್ಲಿಂ ಮತಗಳು ನಿರ್ಣಾಯಕ ವಾಗಿದ್ದು ಬಿಎಸ್ಪಿ ಮುಸ್ಲಿಂ ಮತಗಳನ್ನು ಕೇಂದ್ರಿಕರಿಸಿದೆ.
ಯಾರ ಅದೃಷ್ಟ ಪರೀಕ್ಷೆಯಲ್ಲಿ ?
ಮೊದಲ ಹಂತದಲ್ಲಿ ಸಚಿವರಾದ ಶ್ರೀಕಾಂತ್ ಶರ್ಮಾ, ಸುರೇಶ್ ರಾಣಾ, ಸಂದೀಪ್ ಸಿಂಗ್, ಕಪಿಲ್ ದೇವ್ ಅಗರ್ವಾಲ್, ಅತುಲ್ ಗಾರ್ಗ್ ಮತ್ತು ಚೌಧುರಿ ಲಕ್ಷ್ಮಿ ನಾರಾಯಣ್ ಸೇರಿದಂತೆ ಹಲವು ನಾಯಕರ ಭವಿಷ್ಯ ನಿರ್ಧಾರವಾಗಲಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ