ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿದ ಮೇಲೆ, ಅಲ್ಲಿನ ಪರಿಸ್ಥಿತಿ ಘೋರವಾಗಿದೆ.
ವಾಯು ಸೇನೆಯ ದಾಳಿಯ ಜೋರಾದ ಸದ್ದು, ಭೀಕರ ಸ್ಫೋಟಗಳು, ಮಿಸೈಲ್ಗಳ ದಾಳಿ ನಿರಂತರವಾಗಿ ನಡೆಯುತ್ತಲೇ ಇವೆ. ಉಕ್ರೇನ್ನ ನಾಗರಿಕರ ಪರಿಸ್ಥಿತಿ ಶೋಚನೀಯವಾಗಿದೆ.
ಉಕ್ರೇನ್ ನಾಗರಿಕರು ತಮ್ಮ ಪ್ರಾಣವನ್ನು ಉಳಿಸಿಕೊಳ್ಳಲು ಪರದಾಡುತ್ತಿದ್ದು, ಮೆಟ್ರೋ ಸ್ಟೇಷನ್, ಬಾಂಬ್ ಶೆಲ್ಟರ್ಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ರಷ್ಯಾ ಬಾಂಬ್ ದಾಳಿ ನಡೆಸಿದರೂ ಹಾನಿಯಾಗ ಬಾರದು ಎಂದು ಉಕ್ರೇನ್ ರಾಜಧಾನಿ ಕೀವ್ನಲ್ಲಿ ಸ್ಪೆಷಲ್ ಶೆಲ್ಟರ್ ನಿರ್ಮಾಣ ಮಾಡಲಾಗಿದೆ.
ಅಲ್ಲಿ ಸಾಕಷ್ಟು ಮಂದಿ ಆಶ್ರಯ ಪಡೆದುಕೊಂಡಿದ್ದಾರೆ.
ಕೆಲವು ಗ್ರೌಂಡ್ ರಿಪೋರ್ಟ್ಗಳ ಪ್ರಕಾರ, ಪ್ರತಿ 20 ನಿಮಿಷಕ್ಕೆ ಒಂದರಂತೆ ಬಾಂಬ್ ದಾಳಿ ಮಾಡುತ್ತಿದೆ. ಇಂದು ಬೆಳಗ್ಗೆ ಒಂದು ಬಿಲ್ಡಿಂಗ್ ಅನ್ನ ನೆಲಸಮ ಮಾಡಿದೆ. ಬಾಂಬ್ ದಾಳಿಯಿಂದಾಗಿ ಅಲ್ಲಲ್ಲಿ ಬೆಂಕಿಯ ಚೆಂಡುಗಳು ಕಾಣಿಸಿಕೊಳ್ಳುತ್ತಿದೆ. 9 ಅಂತಸ್ತಿನ ಕಟ್ಟಡ ಒಂದರ ಮೇಲೆ ರಷ್ಯಾದ ವಿಮಾನವೊಂದು ಪತನಗೊಂಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ