“ಹೀಗ್ಯಾಕೆ ಸುಮ್ಮನಿದ್ದುಬಿಟ್ಟಿದ್ದೀಯ?
ಮಾತಾಡು,
ಸದ್ದುಬರುವಂತೆ ಪಾದ ಒತ್ತಿ ನಡೆದಾಡು,
ನೀರು ಗುಟುಕರಿಸುವಾಗ ಬೇಕಂತಲೇ ಗಂಟಲು ಕೊಂಕಿಸು,
ಉಸಿರಾಟ ನೆನಪಾದಾಗೆಲ್ಲ ಸ್ವಲ್ಪ ಜೋರಾಗಿ ಉಸಿರೆಳೆದುಕೊ,
ಆಗಾಗ ಕನ್ನಡಿ ನೋಡಿಕೊಂಡು ಮುಖವಿದೆಯಾ ಅಂತ ಖಾತ್ರಿಮಾಡಿಕೊ……….
ನಗುವು ನಿನ್ನದು, ನಡಿಗೆ ನಿನ್ನದು;
ಆಕಳಿಕೆ, ಬಿಕ್ಕಳಿಕೆಗಳೂ ನಿನ್ನವು.
ಇಲ್ಲಿ ಹಠವಿದೆ, ತ್ಯಾಗವಿದೆ,
ಧ್ಯಾನವಿದೆ, ಪರಿಪೂರ್ಣ ಅರ್ಪಣೆಯಿದೆ.
ನೀ ದೇವಿಯಲ್ಲ;
ಬರಿ ಶಕ್ತಿಯಲ್ಲ..
ಮಾನವತೆಯ ಪರಿಪಾಕ.
ನಿನ್ನ ಆತ್ಮ ಸ್ಥೈರ್ಯ ಸಾಂಕ್ರಾಮಿಕವಾಗಬೇಕು
ಮಿಥ್ಯವನ್ನು ಭಗ್ನಗೊಳಿಸಲು;
ಸತ್ಯವನ್ನು ನಗ್ನಗೊಳಿಸಲು..
ಮೂಕಳಾದರೆ ಲೋಕವೂ ನೂಕಿಬಿಟ್ಟೀತು……….. ಶಬ್ದವಾಗು “
- ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ