ಭರತನಾಳಿದ ಈ ನಾಡು ಭಾರತಾಂಬೆಯ ಮಡಿಲಾಯಿತು ನೋಡಿ ಅವಳ ಬಂಧನದ ಪರ್ವ ಮೊದಲಾಯಿತು
ಭೂಮಿ ವಸುಂಧರೆಯಾದಳು ನೋಡಿ
ಅವಳ ಬಂಗಾರದೊಡಲ ಬಗೆದು,
ಬರಿದು ಮಾಡಲಾಯಿತು
ಜನನಿ ಜನ್ಮ ಭೂಮಿ
ಸ್ವರ್ಗ ಸಮಾನವೆಂದರು ನೋಡಿ
ಗಡಿಯ ಗೆರೆಯೆಳೆದು ವೈಷಮ್ಯದ
ಬೆಂಕಿ ಹಚ್ಚಲಾಯಿತು
ಕಾಡು ಗಿಡಗಂಟೆಗಳ ನಡುವೆ
ಕೋಗಿಲೆಯ ಉಲಿ ಪಲ್ಲವಿಸುವುದನು
ವನದೇವತೆ ಎಂದರು ನೋಡಿ
ಹುಡುಕಿ ಹುಡುಕಿ ಬುಡಕ್ಕೆ ಕೊಡಲಿ ಹಾಕಿ
ಹಸಿರ ನೆತ್ತರ ಹರಿಸುವಂತಾಯಿತು
ಅದೆಲ್ಲೋ ಹಿಮರಾಶಿಯ ನೆತ್ತಿಯಲಿ
ಭೂಮ್ಯಾ0ತರಾಳದಲಿ ನರ್ತನಗೈಯುತ್ತಿದ್ದ
ಜಲರಾಶಿಗೆ ಗಂಗಾ ಮಾತೆ
ಪುಣ್ಯಪ್ರದಾತೆ ಎಂದರು ನೋಡಿ
ಶವವ ಎಸೆದೆಸೆದು ವಿಷವ ಬೆರಸಿ
ಪರಮ ಮಾಲಿನ್ಯಗೊಳಿಸಲಾಯಿತು
ಹೆಣ್ಣು ಕ್ಷಮಯಾಧರಿತ್ರಿ ಎಂದಾಗಲೇ
ಕಂಬನಿಯ ಕರಗಿಸಿ
ಎಗ್ಗಿಲ್ಲದ ನೋವ ಅವುಡುಗಚ್ಚಿ
ಬಚ್ಚಿಡುವಂತಾಯಿತು
ಇದೆಂತಹ ನಂಟು
ಹೆಣ್ಣಿಗೂ ನೋವಿಗೂ?
ಪುಣ್ಯದ ಎಳೆಎಳೆಗೂ
ಪ್ರೀತಿಯ ಕಣಕಣಕ್ಕೂ
ಅಭಿಮಾನದ ಹೊಳೆಹೊಳೆಗೂ
ಹೆಣ್ಣರೂಪ ನೀಡಿದರು ನೋಡಿ
ಅವಳಿಗೂ ನೋವಿಗೂ ಆಗಲೇ
ಅವಿನಾಭಾವ ನಂಟು ಸೃಷ್ಟಿಯಾಯಿತು.
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್