ವಿದ್ಯಾಗಮ ಕಾರ್ಯಕ್ರಮದ ಮೂಲಕ ಅನೇಕ ಶಿಕ್ಷಕರು ಕೊರೋನಾ ಸೋಂಕಿಗೆ ಒಳಪಟ್ಟ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಶಾಲೆಗಳಿಗೆ ಮೂರು ವಾರಗಳ ಕಾಲ ರಜೆ ಘೋಷಣೆ ಮಾಡಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಸಿಎಂ ‘ಕೋವಿಡ್ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆ ಪ್ರಾರಂಬಿಸದಿರುವಂತೆ ನಿರ್ಧರಿಸಲಾಗಿದೆ.
ಹಾಗೆಯೇ ವಿದ್ಯಾಗಮ ಕಾರ್ಯಮವನ್ನೂ ಸಹ ನಿಲ್ಲಿಸಲು ಆದೇಶ ನೀಡಲಾಗಿದೆ. ಮಾಧ್ಯಮಗಳ ಮೂಲಕ ಅನೇಕ ಶಿಕ್ಷಕರು ಕೋವಿಡ್ ಸೋಂಕಿಗೆ ಒಳಗಾಗುವುದನ್ನು ನಾನು ಗಮನಿಸಿರುವೆ. ಹಾಗಾಗಿ 12-10-2020 ರಿಂದ 30-10-2020 ವರೆಗೆ, ಮೂರು ವಾರಗಳ ಕಾಲ, ರಜೆಯನ್ನು ಘೋಷಣೆ ಮಾಡಿ ಆದೇಶ ಹೊರಡಿಸಲು ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ.’ ಎಂದು ಹೇಳಿದ್ದಾರೆ.
ಮುಂಚಿತವಾಗಿಯೇ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕ ವೃಂದದವರಿಗೆ ದಸರಾ ಹಬ್ಬದ ಶುಭಾಶಯಗಳನ್ನೂ ಕೋರಿದ್ದಾರೆ.