ಕೌಟುಂಬಿಕ ಕಲಹದಿಂದ ಬೇಸರಗೊಂಡಿದ್ದ ತಾಯಿ, ಮಗು ಜೊತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಟಿ.ನರಸೀಪುರ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.
ನಂದಿನಿ(35) , ಸಿಂಚನಾ(9) ಮೃತ ದುರ್ದೈವಿಗಳು.
ಕೌಟುಂಬಿಕ ಕಲಹದಿಂದ ಬೇಸತ್ತ ನಂದಿನಿ ಮಗಳಿಗೆ ವಿಷ ಉಣಿಸಿ ತಾನೂ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೌಟುಂಬಿಕ ಕಲಹದ ಕಾರಣದಿಂದಲೇ ಹಲವು ದಿನಗಳಿಂದ ನಂದಿನಿ ಪತಿಯಿಂದ ದೂರವಿದ್ದರು.
ಅದೇ ವಿಚಾರಕ್ಕೆ ಆಗಾಗ ಗಲಾಟೆಗಳು ನಡೆಯುತ್ತಿತ್ತು ಎಂದು ಹೇಳಲಾಗುತ್ತಿದೆ.
ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.