ಭಗತ್ ಸಿಂಗ್ ಸ್ವಗ್ರಾಮದಲ್ಲೇ ನಾನು ಪಂಜಾಬ್ ಸಿಎಂಆಗಿ ಪ್ರಮಾಣವಚನ ಸ್ವೀಕರಿಸುವುದಾಗಿ ಎಪಿಪಿ ಪಕ್ಷದ ನಿಯೋಜಿತ ಸಿಎಂ ಭಗವಂತ್ ಮಾನ್ ಘೋಷಣೆ ಮಾಡಿದರು
ಸುದ್ದಿಗಾರರ ಜೊತೆ ಮಾತಾಡಿದ ಪಂಜಾಬ್ ಎಎಪಿ ಸಿಎಂ ಅಭ್ಯರ್ಥಿ ಭಗವಂತ್ ಮಾನ್, ಭಗತ್ ಸಿಂಗ್ ಹುಟ್ಟೂರಿನಲ್ಲೇ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸೋದಾಗಿ ಹೇಳಿದ್ದಾರೆ.
ಭಗತ್ ಸಿಂಗ್ ಪೂರ್ವಜರ ಗ್ರಾಮದಲ್ಲಿ ಪದ ಗ್ರಹಣ ಮಾಡುವೆ. ಸರ್ಕಾರಿ ಕಚೇರಿಗಳಲ್ಲಿ ಭಗತ್ ಸಿಂಗ್, ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸುವೆ ಎಂದು ಘೋಷಿಸಿದ್ದಾರೆ.
2022 ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿ ಅಭೂತಪೂರ್ವ ಗೆಲುವು ಸಾಧಿಸಿದೆ. ಇತ್ತೀಚೆಗೆ ಪಂಜಾಬ್ ಸೇರಿ ಪಂಚ ರಾಜ್ಯಗಳ ಚುನಾವಣೆ ನಡೆದಿತ್ತು.
ಇನ್ನೇನು ಕೇಂದ್ರ ಚುನಾವಣಾ ಆಯೋಗ ಅಧಿಕೃತ ಫಲಿತಾಂಶ ಘೋಷಣೆ ಮಾಡಲಿದೆ , ಪಂಜಾಬ್ನಲ್ಲಿ ಎಎಪಿ ಕ್ಲೀನ್ ಸ್ವೀಪ್ ಮಾಡಿದೆ ಎನ್ನಲಾಗಿದೆ.