ಶ್ರೀ ರಾಮುಲುಗೆ ಸಮಾಜ ಕಲ್ಯಾಣ: ಆರೋಗ್ಯ ಖಾತೆ ಡಾ. ಸುಧಾಕರ್‌ಗೆ

Team Newsnap
1 Min Read

ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಪ್ರಮುಖ ಬದಲಾವಣೆಗಳು ನಡೆಯುತ್ತಿವೆ. ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಶ್ರೀರಾಮುಲು ಅವರ ಆರೋಗ್ಯ ಖಾತೆಯನ್ನು ವೈದ್ಯಕೀಯ ಸಚಿವ ಡಾ. ಸುಧಾಕರ್ ಅವರಿಗೆ ನೀಡಲು ತೀರ್ಮಾನಿಸಿದ್ದಾರೆ.

Dr K Sudhakar 1581670361

ಕೋವಿಡ್ ಈಗ ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿದೆ. ಆರೋಗ್ಯ ಇಲಾಖೆಗೂ ಹಾಗೂ ವೈದ್ಯಕೀಯ ಇಲಾಖೆಗೂ ಸರಿಯಾದ ಸಮನ್ವಯತೆ ಕಂಡು ಬರುತ್ತಿಲ್ಲ. ಆದ್ದರಿಂದ ಮುಖ್ಯಮಂತ್ರಿಗಳು, ಕೋವಿಡ್‌ನ್ನು ಸಮರ್ಪಕವಾಗಿ ನಿಯಂತ್ರಿಸುವಿಕೆಯ ದೃಷ್ಠಿಯಿಂದ ಮತ್ತು ಆರೋಗ್ಯ ಇಲಾಖೆಗೆ ಸಂಬಂಧಿಸಿದ ಎಲ್ಲಾ ಕೆಲಸಗಳು ಸುಗಮವಾಗಿ ಸಾಗಲು‌ ಈ‌ ನಿರ್ಧಾರ ಕೈಗೊಂಡಿದ್ದಾರೆ.

ಹಾಗೆಯೇ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಬಳಿಯಿರುವ ಸಮಾಜ ಕಲ್ಯಾಣ ಖಾತೆಯನ್ನು ಶ್ರೀರಾಮುಲು ಅವರಿಗೆ ವಹಿಸಲಾಗಿದೆ .ಸಂಪುಟ ಪುನರ್‌ರಚನೆಗೂ ಮೊದಲೇ ಕೆಲ ಆಯ್ದ ಬಹುಮುಖ್ಯ ಸಚಿವರ ಖಾತೆ ಬದಲಾವಣೆಗೆ ಮುಖ್ಯಮಂತ್ರಿಗಳು ಮುಂದಾಗಿದ್ದಾರೆ.

ಈ ಖಾತೆಗಳ ಬದಲಾವಣೆಯ ಕುರಿತ ಅಧಿಕೃತ ಆದೇಶ ಸದ್ಯದಲ್ಲೇ ಹೊರಬೀಳಲಿದೆ ಎಂದು ಮುಖ್ಯಮಂತ್ರಿಗಳ ಸಚಿವಾಲಯದಿಂದ ಮಾಹಿತಿ ಬಂದಿದೆ.

Share This Article
Leave a comment