ದಿ ಕಾಶ್ಮೀರ್ ಫೈಲ್ಸ್ ಹಾಗೂ ಜೇಮ್ಸ್ ನಡುವೆ ಹೋಲಿಕೆ ಮಾಡಿ ತಂದು ಹಾಕುವುದು ಬೇಡ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮನವಿ ಮಾಡಿದರು.
ದಿ ಕಾಶ್ಮೀರ ಫೈಲ್ಸ್ ಹಿಂದಿ ಚಿತ್ರಕ್ಕೆ ತೆರಿಗೆ ವಿನಾಯತಿ ಮಾಡಿದ ರೀತಿಯಲ್ಲೇ ಜೇಮ್ಸ್ ಚಿತ್ರಕ್ಕೂ ತೆರಿಗೆ ವಿನಾಯಿತಿ ಮಾಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಒತ್ತಾಯಕ್ಕೆ ಸಿ ಟಿ ರವಿ ಪ್ರತಿಕ್ರಿಯೆ ನೀಡಿದರು
ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಶ್ಮೀರ ಫೈಲ್ ಸಿನಿಮಾವು ಸತ್ಯಾಂಶಗಳ ಮೇಲೆ ತೆಗೆದಿರುವ ಸಿನಿಮಾವಾಗಿದೆ. ಇದು ಸಹ ಸಂದೇಶ ಇರುವ ಸಿನಿಮಾ ಇದಕ್ಕೂ ಸಹ ತೆರಿಗೆ ವಿನಾಯಿತಿ ಕೊಡಲಿ, ಆದರೆ ಎರಡು ಸಿನಿಮಾಗಳನ್ನು ಹೋಲಿಕೆ ಮಾಡುವುದು ಬೇಡ ಎಂದರು.
ಪುನೀತ್ ರಾಜ್ಕುಮಾರ್ ಅವರ ಹುಟ್ಟುಹಬ್ಬ ಸಂಭ್ರಮಿಸಿ ಕುಣಿದಾಡಬೇಕಿದ್ದ ಅಭಿಮಾನಿಗಳು ದುಃಖದಲ್ಲಿ ಅವರ ಹುಟ್ಟು ಹಬ್ಬ ಆಚರಿಸಿಕೊಳ್ಳಬೇಕಿದೆ. ಪುನೀತ್ ರಾಜಕುಮಾರ್ ಒಬ್ಬ ಮಾದರಿ ವ್ಯಕ್ತಿ. ಅವರ ನಡೆಯನ್ನು ಅಭಿಮಾನಿಗಳು ಅನುಸರಿಸಿದರೆ ಅದೇ ನಾವು ಅವರಿಗೆ ಕೊಡುವ ಗೌರವ ಅವರ ನಡೆಯಲ್ಲಿ ನಾವೆಲ್ಲಾ ನಡೆಯಬೇಕಿದೆ. ಕಾಶ್ಮೀರ ಫೈಲ್ ರೀತಿ ತೆರಿಗೆ ವಿನಾಯಿತಿ ಕೊಡುವ ವಿಚಾರ ಎರಡು ಸಿನಿಮಾಗಳಿಗೆ ತಂದು ಹಾಕುವ ಕೆಲಸ ಬೇಡ ಎಂದು ತಿಳಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್