ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ನಟಿಸಿದ ನಂತರ ನನ್ನನ್ನು ನರೇಂದ್ರ ಮೋದಿ ಚಮಚಾ ಎನ್ನುತ್ತಿದ್ದಾರೆ. ಸತ್ಯವನ್ನು ಒಪ್ಪಿಕೊಳ್ಳಲು ಕಷ್ಟವಾದವರು ಈ ರೀತಿ ಮಾತನಾಡುವುದು ಸಹಜ ಎಂದಿದ್ದಾರೆ ನಟ ಪ್ರಕಾಶ್ ಬೆಳವಾಡಿ.
ಈ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಇರದೇ ಇದ್ದರೆ ಸಿನಿಮಾ ಬಿಡುಗಡೆಯೇ ಆಗುತ್ತಿರಲಿಲ್ಲ ಎಂದರು ಪ್ರಕಾಶ್ ಬೆಳವಾಡಿ.
ಮೈಸೂರಿನಲ್ಲಿ ಗುರುವಾರ ‘ಮೈಸೂರು ಸಿನಿಮಾ ಸೊಸೈಟಿ’ ಏರ್ಪಡಿಸಿದ್ದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಪ್ರದರ್ಶನ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಆ ಚಿತ್ರದಲ್ಲಿ ನಟಿಸಿರುವ ನಟ ಪ್ರಕಾಶ್ ಬೆಳವಾಡಿ ಮಾತನಾಡಿದರು.
ಈ ಸಿನಿಮಾ ಅಪಪ್ರಚಾರಕ್ಕೆ ಬಳಕೆ ಆಗುತ್ತಿದೆ. ಜಾತಿರಾಜಕಾರಣಕ್ಕೆ ಕಾರಣವಾಗಿದೆ. ಧರ್ಮಗಳ ನಡುವೆ ದ್ವೇಷ ಬಿತ್ತುತ್ತಿದೆ ಎಂದು ಮಾತನಾಡುತ್ತಿದ್ದಾರೆ. ಸಿನಿಮಾ ಇರುವುದೇ ಸತ್ಯ ಹೇಳುವುದಕ್ಕೆ. ಈ ಸಿನಿಮಾ ಸತ್ಯವನ್ನೇ ಹೇಳಿದೆ ಅಷ್ಟೆ ಎಂದರು.
ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ನಟಿಸಿದ್ದಕ್ಕಾಗಿ ಮತ್ತು ಆ ಸಿನಿಮಾದ ಪ್ರಚಾರದಲ್ಲಿ ಭಾಗಿಯಾಗಿದ್ದಕ್ಕಾಗಿ ತಮ್ಮನ್ನು ನರೇಂದ್ರ ಮೋದಿ ಅವರ ಚಮಚಾ ಎಂದು ಕರೆಯುತ್ತಿರುವ ವಿಷಯವನ್ನೂ ಅವರು ಹೇಳಿಕೊಂಡರು. ಕೆಲವು ವಿಷಯಗಳನ್ನು ಮೋದಿ ಅವರನ್ನು ಬೆಂಬಲಿಸಿದ್ದು ನಿಜ ಎಂದು ಪ್ರಕಾಶ್ ಬೆಳವಾಡಿ ಒಪ್ಪಿಕೊಂಡರು. ಯಾರು ಏನು ಬೇಕಾದರೂ ಅಂದುಕೊಳ್ಳಲಿ ನಾನು ಸತ್ಯದ ಪರ ಇರುವುದಾಗಿ ಅವರು ಸ್ಪಷ್ಟ ಪಡಿಸಿದರು.
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
- ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ