ರಷ್ಯಾ-ಉಕ್ರೇನ್ ನಡುವಿನ ಯುದ್ಧದಲ್ಲಿ ಶೆಲ್ ದಾಳಿಗೆ ಬಲಿಯಾಗಿದ್ದ ಕನ್ನಡಿಗ ನವೀನ್ (22) ಮತದೇಹವನ್ನು ಕೊನೆಗೂ ತಾಯ್ನಾಡಿಗೆ ತರಲಾಗುತ್ತಿದೆ.
ಭಾನುವಾರದಂದು(ಮಾರ್ಚ್ 20) ನವೀನ್ ಪಾರ್ಥೀವ ಶರೀರವನ್ನು ತರಲಾಗುತ್ತಿದೆ ಅಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರು ವಿಮಾನ ನಿಲ್ದಾಣ ತಲುಪಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಖಾರ್ಕಿವ್ನಲ್ಲಿ ಮೆಡಿಕಲ್ ಓದುತ್ತಿದ್ದ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕು ಚಳಗೇರಿಯ ನವೀನ್ ಸೂಪರ್ ಮಾರ್ಕೆಟ್ ಗೆ ಹೋಗಿ ಸಾಲಿನಲ್ಲಿ ನಿಂತಿದ್ದಾಗ ರಷ್ಯಾ ಶೆಲ್ ದಾಳಿಯಿಂದಾಗಿ ದುರ್ಮರಣಕ್ಕೀಡಾಗಿದ್ದರು.
ಅಂದು ಬೆಳಗ್ಗೆ 7.30ಕ್ಕೆ ರೈಲ್ವೇ ನಿಲ್ದಾಣಕ್ಕೆ ಹೋಗಬೇಕಿತ್ತು. ರೈಲಿನ ಮೂಲಕ ಪೋಲೆಂಡ್ ಗಡಿ ತಲುಪಬೇಕಿತ್ತು.
ನವೀನ್ ಸೇರಿ 8 ಜನರ ತಂಡ ರೈಲ್ವೇ ನಿಲ್ದಾಣಕ್ಕೆ ಹೊರಡಬೇಕಿತ್ತು. ಈ ವೇಳೆ, ಎಲ್ಲರಿಗೂ ಊಟ ತರಲು ಬಂಕರ್ನಿಂದ ನವೀನ್ ಹೊರ ಹೋಗಿ ಸೂಪರ್ ಮಾರ್ಕೆಟ್ ಬಳಿ ಕ್ಯೂನಲ್ಲಿ ನಿಂತಿದ್ದ ವೇಳೆ ರಷ್ಯಾದ ಶೆಲ್ ಅವರನ್ನು ಆಹುತಿ ಪಡೆದಿತ್ತು.
ನವೀನ್ ತನ್ನ ಹೈಸ್ಕೂಲ್ ಹಾಗೂ ಪಿಯು ವಿದ್ಯಾಭ್ಯಾಸವನ್ನು ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನಲ್ಲಿ ಪೂರ್ಣಗೊಳಿಸಿದ್ದರು ಎಂದು ಸ್ಥಳೀಯ ಮೂಲಗಳು ತಿಳಿಸಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು