ರಷ್ಯಾ-ಉಕ್ರೇನ್ ನಡುವಿನ ಯುದ್ಧದಲ್ಲಿ ಶೆಲ್ ದಾಳಿಗೆ ಬಲಿಯಾಗಿದ್ದ ಕನ್ನಡಿಗ ನವೀನ್ (22) ಮತದೇಹವನ್ನು ಕೊನೆಗೂ ತಾಯ್ನಾಡಿಗೆ ತರಲಾಗುತ್ತಿದೆ.
ಭಾನುವಾರದಂದು(ಮಾರ್ಚ್ 20) ನವೀನ್ ಪಾರ್ಥೀವ ಶರೀರವನ್ನು ತರಲಾಗುತ್ತಿದೆ ಅಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರು ವಿಮಾನ ನಿಲ್ದಾಣ ತಲುಪಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಖಾರ್ಕಿವ್ನಲ್ಲಿ ಮೆಡಿಕಲ್ ಓದುತ್ತಿದ್ದ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕು ಚಳಗೇರಿಯ ನವೀನ್ ಸೂಪರ್ ಮಾರ್ಕೆಟ್ ಗೆ ಹೋಗಿ ಸಾಲಿನಲ್ಲಿ ನಿಂತಿದ್ದಾಗ ರಷ್ಯಾ ಶೆಲ್ ದಾಳಿಯಿಂದಾಗಿ ದುರ್ಮರಣಕ್ಕೀಡಾಗಿದ್ದರು.
ಅಂದು ಬೆಳಗ್ಗೆ 7.30ಕ್ಕೆ ರೈಲ್ವೇ ನಿಲ್ದಾಣಕ್ಕೆ ಹೋಗಬೇಕಿತ್ತು. ರೈಲಿನ ಮೂಲಕ ಪೋಲೆಂಡ್ ಗಡಿ ತಲುಪಬೇಕಿತ್ತು.
ನವೀನ್ ಸೇರಿ 8 ಜನರ ತಂಡ ರೈಲ್ವೇ ನಿಲ್ದಾಣಕ್ಕೆ ಹೊರಡಬೇಕಿತ್ತು. ಈ ವೇಳೆ, ಎಲ್ಲರಿಗೂ ಊಟ ತರಲು ಬಂಕರ್ನಿಂದ ನವೀನ್ ಹೊರ ಹೋಗಿ ಸೂಪರ್ ಮಾರ್ಕೆಟ್ ಬಳಿ ಕ್ಯೂನಲ್ಲಿ ನಿಂತಿದ್ದ ವೇಳೆ ರಷ್ಯಾದ ಶೆಲ್ ಅವರನ್ನು ಆಹುತಿ ಪಡೆದಿತ್ತು.
ನವೀನ್ ತನ್ನ ಹೈಸ್ಕೂಲ್ ಹಾಗೂ ಪಿಯು ವಿದ್ಯಾಭ್ಯಾಸವನ್ನು ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನಲ್ಲಿ ಪೂರ್ಣಗೊಳಿಸಿದ್ದರು ಎಂದು ಸ್ಥಳೀಯ ಮೂಲಗಳು ತಿಳಿಸಿವೆ.
- ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ