ಮೈಸೂರಿನಲ್ಲಿ ರೋಹಿಣಿ ಸಿಂಧೂರಿ ಜಿಲ್ಲಾಧಿಕಾರಿ ಸೇವೆ ಸಲ್ಲಿಸುವ ವೇಳೆ ಕೋಟ್ಯಾಂತರ ರು ಬಟ್ಟೆ ಬ್ಯಾಗ್ ಗಳನ್ನು ಖರೀದಿಸಿ, ವಿತರಣೆ ಮಾಡಿದ ಹಗರಣವನ್ನು ಸಮಗ್ರವಾಗಿ ತನಿಖೆ ನಡೆಸುವಂತೆ ಸರ್ಕಾರ ಆದೇಶಿಸಿದೆ.
ಸರ್ಕಾರದ ಈ ನಿಧಾ೯ರದಿಂದ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ
ಅಂದಿನ DC ರೋಹಿಣಿ ವರ್ಗಾವಣೆಯಾಗಿ 11 ತಿಂಗಳು ಕಳೆದಿದ್ದರೂ ಹಗರಣ ಮಾತ್ರ ಇನ್ನೂ ಜೀವಂತವಾಗಿದೆ. ಶಾಸಕ ಸಾರಾ ಮಹೇಶ್ ಹಾಗೂ ರೋಹಿಣಿ ನಡುವಿನ ಜಟಾಪಟಿಗೆ ಈ ಹಗರಣದ ತನಿಖೆಯ ನಿಧಾ೯ರ ಹೊಸ ಟ್ವಿಸ್ಟ್ ನೀಡಲಿದೆ
ಮಾರುಕಟ್ಟೆಯಲ್ಲಿ 10 -15 ರು ಲಭ್ಯವಾಗುವ ಈ ಬಟ್ಟೆ ಬ್ಯಾಗ್ ಅನ್ನು 52 ರು ಖರೀದಿಗೆ ಮಾಡಲಾಗಿದೆ. ಕೈಮಗ್ಗ ಅಭಿವೃದ್ದಿ ನಿಗಮವನ್ನು ಬಿಟ್ಟು ಖಾಸಗಿ ವ್ಯಕ್ತಿಗಳಿಗೆ ಟೆಂಡರ್ ನೀಡಿ 14.71 ಲಕ್ಷ ಬ್ಯಾಗ್ ಖರೀದಿಸಿ 14 ಕೋಟಿ ಅವ್ಯವಹಾರ ಮಾಡಲಾಗಿರುವ ಬಗ್ಗೆ ಶಾಸಕ ಮಹೇಶ್ ಅಧಿವೇಶನದಲ್ಲೇ ಸರ್ಕಾರದ ಗಮನ ಸೆಳೆದು ತನಿಖೆ ಒತ್ತಾಯಮಾಡಿದ್ದರು
ಈ ಹಗರಣದ ದೂರು ಕೇಳುತ್ತಿದ್ದಂತೆ ರೋಹಿಣಿ ಅವರನ್ನು ಬೆಂಗಳೂರಿಗೆ ವಗಾ೯ವಣೆಯ ಶಿಕ್ಷೆ ನೀಡಿ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳುವಂತೆ ಮಾಡಿತ್ತು. ಆದರೆ ಈ ಹಗರಣದ ತನಿಖೆ ನಡೆಸಲು ಸರ್ಕಾರ ನಿರ್ಧರಿಸಿರುವುದು ರೋಹಿಣಿಗೆ ಮತ್ತೆ ಆತಂಕ ಸೃಷ್ಠಿಯಾಗುವಂತೆ ಮಾಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಮುಡಾ ಹಗರಣ: ದಾಖಲೆ ಒದಗಿಸಿದವರಲ್ಲಿ ಕಾಂಗ್ರೆಸ್ ನಾಯಕರು ಸಹ ಇದ್ದರು – ಸ್ನೇಹಮಯಿ ಕೃಷ್ಣಾ