January 29, 2026

Newsnap Kannada

The World at your finger tips!

cm3

ಶ್ರೀ ರಾಮುಲು ಮುನಿಸು ತಣ್ಣಗೆ:ಸಿಎಂ ಸಂಧಾನ ಸಕ್ಸಸ್

Spread the love

ಖಾತೆ ಬದಲಾವಣೆ ನಿರ್ಧಾರದಲ್ಲಿ ರಚ್ಚೆ ಹಿಡಿದಿದ್ದ ಸಚಿವ ಶ್ರೀರಾಮು ಕೊನೆಗೂ ಸಿ ಎಂ ಸಂಧಾನದಲ್ಲಿ ತಣ್ಣಗಾಗಿದ್ದಾರೆ

ಸಿಎಂ ಬಿಎಸ್ ಯಡಿಯೂರಪ್ಪ ನಿವಾಸದಲ್ಲಿ ಮಂಗಳವಾರ ಬೆಳಿಗ್ಗೆ ಸಚಿವರಾದ ಡಾ. ಕೆ.ಸುಧಾಕರ್ ಮತ್ತು ಶ್ರೀರಾಮುಲು ಮಧ್ಯೆ ಸಿಎಂ ಸಂಧಾನ ಮಾಡಿದರು. ಕೇವಲ 5 ನಿಮಿಷಗಳಲ್ಲಿ ಮಾತುಕತೆ ಮಗಿಸಿದರ.

ಸಂಧಾನ ಸಭೆ ಬಳಿಕ ಇಬ್ಬರು ಸಚಿವರು ಮಾಧ್ಯಮ ದವರ ಜೊತೆ ಮಾತನಾಡಿ,
ಖಾತೆ ಬದಲಾವಣೆ ಮಾಡಿದ ವಿಚಾರವಾಗಿ ಒಳ್ಳೆಯ ಕೆಲಸ ಮಾಡಲು ಸಿಎಂ ಸಲಹೆ ಕೊಟ್ಟಿದ್ದಾರೆ. ನಮ್ಮಿಬ್ಬರನ್ನೂ ಕರೆಸಿ ಸಿಎಂ ಬಿಎಸ್ವೈ ಸೂಚನೆ ಕೊಟ್ಟಿದ್ದಾರೆ ಎಂದು ಶ್ರೀರಾಮುಲು ಹೇಳಿದರು.

ಸಿಎಂ ಬಿಎಸ್ವೈ ಬಳಿ ಈ ಹಿಂದೆಯೇ ಸಮಾಜ ಕಲ್ಯಾಣ ಖಾತೆ ಕೇಳಿದ್ದೆ. ಸಿಎಂ ನನಗೆ ಈಗ ಸಮಾಜ ಕಲ್ಯಾಣ ಖಾತೆ ಕೊಟ್ಟಿದ್ದಾರೆ. ನಾನು ಸಂತೋಷದಿಂದ ಈ ಖಾತೆ ವಹಿಸಿಕೊಂಡಿದ್ದೇನೆ. ನನ್ನ ಸ್ನೇಹಿತರಾಗಿರುವ ಸುಧಾಕರ್ ವೈದ್ಯರಾಗಿರುವ ಹಿನ್ನೆಲೆ ಸಿಎಂ ಅವರಿಗೆ ವೈದ್ಯಕೀಯ ಶಿಕ್ಷಣ ಜೊತೆ ಆರೋಗ್ಯ ಇಲಾಖೆಯನ್ನು ವಹಿಸಿದ್ದಾರೆ ಎಂದು ಶ್ರೀರಾಮುಲು ಹೇಳಿದರು.

ಈ ಹಿಂದೆ ಕೆ.ಸುಧಾಕರ್ ಗೆ ಬೆಂಗಳೂರು ಉಸ್ತುವಾರಿ ನೀಡಿದ್ದರು. ಸುಧಾಕರ್ ಕೊರೊನಾ ವಿಚಾರದಲ್ಲಿ ಬೆಂಗಳೂರು ಉಸ್ತುವಾರಿಯಾಗಿದ್ರು. ನಾನಿದ್ದಾಗ ಬೆಂಗಳೂರಲ್ಲಿ ಕೊರೊನಾ ಕೇಸ್ ಸಾವಿರ ಇತ್ತು. ಸುಧಾಕರ್ ಪಡೆದ ಬಳಿಕ ಕೊರೊನಾ ಕೇಸ್ 5000ಕ್ಕೇರಿತ್ತು. ಹೀಗೆಂದು ನಾನು ನಿಭಾಯಿಸಲು ವಿಫಲನಾಗಿದ್ದೇನೆ ಎಂದಲ್ಲ ಎಂದು ಶ್ರೀರಾಮುಲು ಪರೋಕ್ಷವಾಗಿ ಸುಧಾಕರ್ ಗೆ ಟಾಂಗ್ ಕೊಟ್ಟರು.

error: Content is protected !!