ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಪೇದೆ ಸೇರಿ ಇಬ್ಬರು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಬುಡನಾಳ ಕ್ರಾಸ್ ಬಳಿ ಸಂಭವಿಸಿದೆ.
ಹಿಟ್ ಅಂಡ್ ರನ್ ಪ್ರಕರಣದಲ್ಲಿ ಕರ್ತವ್ಯದಲ್ಲಿದ್ದ ಕಲಘಟಗಿ ಪೊಲೀಸ್ ಠಾಣೆ ಪೇದೆ ಪಂಡಿತ್
ಎ. ಕಾಸರ್ (28) ಸಾವನ್ನಪ್ಪಿದ್ದಾರೆ.
ಭಾರೀ ಮಳೆ, ಬಿರುಗಾಳಿಗೆ ಮರಗಳು ಉರುಳಿ ಬಿದ್ದು ಹುಬ್ಬಳ್ಳಿ-ಕಾರವಾರ ರಸ್ತೆಯಲ್ಲಿ ಉಂಟಾಗಿತ್ತು ಟ್ರಾಫಿಕ್ ಸಮಸ್ಯೆ ಎದುರಾಗಿತ್ತು.
ಈ ಮಾರ್ಗದ ಟ್ರಾಫಿಕ್ ಕ್ಲಿಯರ್ ಮಾಡಲು ಸ್ಥಳಕ್ಕೆ ಪೊಲೀಸರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಅಪರಿಚಿತ ವಾಹನವೊಂದು ಸ್ಥಳೀಯರು ಸೇರಿದಂತೆ, ಪೊಲೀಸ್ ಪೇದೆಗೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
- ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು
- Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ
- ಪ್ರಜ್ವಲ್ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್ ಈಶ್ವರಪ್ಪ
- ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ
- ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ
- ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು