ಸ್ವಾತಂತ್ರ್ಯದ ಬಳಿಕ ದೇಶದಲ್ಲಿ 14 ಮಂದಿ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಪ್ರತಿಯೊಬ್ಬರ ಕಥೆ ಹೇಳುವ ವಸ್ತು ಸಂಗ್ರಹಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಉದ್ಘಾಟಿಸಲಿದ್ದಾರೆ.
ಆಜಾದಿ ಕಾ ಅಮೃತ್ ಮಹೋತ್ಸವ್ ಆಚರಣೆಯ ಅಂಗವಾಗಿ ಉದ್ಘಾಟನೆಯಾಗಲಿರುವ ವಸ್ತುಸಂಗ್ರಹಾಲಯ ಸ್ವಾತಂತ್ರ್ಯದ ಬಳಿಕದ ಭಾರತದ ಕಥೆ, ಪ್ರಧಾನ ಮಂತ್ರಿಗಳ ಜೀವನ ಹಾಗೂ ಅವರು ನೀಡಿರುವ ಕೊಡುಗೆಗಳನ್ನು ತಿಳಿಸಲಿದೆ.
ನವದೆಹಲಿಯ ತೀನ್ ಮೂರ್ತಿ ಕಾಂಪ್ಲೆಕ್ಸ್ನಲ್ಲಿರುವ ಈ ವಸ್ತುಸಂಗ್ರಹಾಲಯ ದೇಶದ ಎಲ್ಲಾ 14 ಪ್ರಧಾನ ಮಂತ್ರಿಗಳ ಬಗ್ಗೆ ಜನರಿಗೆ ತಿಳಿಸಲು ಅಭಿವೃದ್ಧಿಪಡಿಸಲಾಗಿದೆ ಹಾಗೂ ಭವಿಷ್ಯದಲ್ಲಿ ನಾಯಕರಾಗುವವರಿಗೂ ಇಲ್ಲಿ ಮಾಹಿತಿಗಳನ್ನು ಸಂಗ್ರಹಿಸಲು ಸಾಕಷ್ಟು ಸ್ಥಳಾವಕಾಶವಿದೆ ಎಂದು ಸರ್ಕಾರ ಹೇಳಿದೆ.
ರಾಷ್ಟ್ರ ನಿರ್ಮಾಣಕ್ಕಾಗಿ ಶ್ರಮವಹಿಸಿದ, ದೇಶಕ್ಕೆ ಕೊಡುಗೆ ನೀಡಿದ, ಸ್ವಾತಂತ್ರ್ಯ ನಂತರದ ಪ್ರತಿಯೊಬ್ಬ ಪ್ರಧಾನ ಮಂತ್ರಿಗಳ ಅಧಿಕಾರ ಅಥವಾ ಸಿದ್ಧಾಂತವನ್ನು ಲೆಕ್ಕಿಸದೇ ಈ ವಸ್ತು ಸಂಗ್ರಹಾಲಯದ ನಿರ್ಮಾಣ ಮಾಡಲಾಗಿದೆ.
ಇದು ಯುವ ಪೀಳಿಗೆಯನ್ನು ಪ್ರೇರೇಪಿಸುವ ಗುರಿ ಹೊಂದಿದೆ ಎಂದು ಮೋದಿ ತಿಳಿಸಿದ್ದಾರೆ.
ಹೊಲೊಗ್ರಾಮ್ಗಳು, ವರ್ಚುವಲ್ ರಿಯಾಲಿಟಿ, ಮಲ್ಟಿ-ಟಚ್, ಮಲ್ಟಿಮೀಡಿಯಾ, ಸಂವಾದಾತ್ಮಕ ಕಿಯೋಸ್ಕ್ಗಳು, ಕಂಪ್ಯೂಟರೀಕೃತ ಚಲನ ಶಿಲ್ಪಗಳು, ಸ್ಮಾರ್ಟ್ಫೋನ್ ಅಪ್ಲಿಕೇಶನ್ಗಳು, ಸಂವಾದಾತ್ಮಕ ಪರದೆಗಳು ಹೀಗೆ ಮೊದಲಾದ ಫೀಚರ್ಗಳನ್ನು ಅಳವಡಿಸಲಾಗಿದೆ.
ಮ್ಯೂಸಿಯಂನಲ್ಲಿ ಒಟ್ಟು 43 ಗ್ಯಾಲರಿಗಳಿವೆ. ಇದು ಸ್ವಾತಂತ್ರ್ಯ ಹೋರಾಟ ಮತ್ತು ಸಂವಿಧಾನ ರಚನೆ ಬಗೆಗಿನ ಪ್ರದರ್ಶನ ಆರಂಭಗೊಂಡು, ಪ್ರಧಾನ ಮಂತ್ರಿಗಳು ರಾಷ್ಟ್ರವನ್ನು ಹೇಗೆ ಹೊಸದಾಗಿ ನಿರ್ಮಾಣ ಮಾಡಿದರು ಹಾಗೂ ದೇಶದ ಸರ್ವತೋಮುಖ ಪ್ರಗತಿಯ ಕಥೆಯನ್ನು ಮ್ಯೂಸಿಯಂ ಹೇಳುತ್ತದೆ.
ಪಿಎಂ ಮ್ಯೂಸಿಯಂಗೆ ವಿರೋಧ:
2018ರಲ್ಲಿ ನರೇಂದ್ರ ಮೋದಿ ಮ್ಯೂಸಿಯಂ ನಿರ್ಮಾಣದ ಬಗ್ಗೆ ಘೋಷಿಸಿದಾಗ ಇದು ಜವಾಹರಲಾಲ್ ನೆಹರು ಅವರ ಪರಂಪರೆಯನ್ನು ಟೀಕಿಸುವ ಪ್ರಯತ್ನವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ