ಹಿಂದೂ ಮುಸ್ಲಿಮರ ಮಧ್ಯೆ ಮತ ಭೇದ ಪ್ರಾರಂಭವಾಗುವುದಕ್ಕೆ ಈ 6 ಮಕ್ಕಳು ಹಾಗೂ ಅವರ ಪೋಷಕರೇ ಕಾರಣ ಎಂದು ಶಾಸಕ ರಘುಪತಿ ಭಟ್ ಹೇಳಿದರು
ಸುದ್ದಿಗಾರರ. ಜೊತೆ ಮಾತನಾಡಿದ ಭಟ್ ಹೆಣ್ಣು ಮಕ್ಕಳು ನಮ್ಮ ಮಾತು ಕೇಳಿದ್ದರೆ ಈವರೆಗೂ ಬರುತ್ತಿಲಿಲ್ಲ. ಈ 6 ಮಕ್ಕಳಿಗೆ ಧರ್ಮ ಇದೆ, ನಮಗೆ ಧರ್ಮ ಬೇಡವಾ? ನಮಗೂ ಧರ್ಮ ಇದೆ,
ಎಂದರು
ನಾವು ಹಲಾಲ್ ತಿನ್ನಲ್ಲ. ನಾವು ಕಾನೂನು ಪ್ರಕಾರ ಜಾತ್ರೆಗಳಲ್ಲಿ ವ್ಯಾಪಾರ ಮಾಡಲು ಬಿಡಲ್ಲ. ಹಿಂದೂ ಮುಸ್ಲಿಮರ ಮಧ್ಯೆ ಮತ ಭೇದ ಪ್ರಾರಂಭ ಆಗುವುದಕ್ಕೆ ಈ 6 ಮಕ್ಕಳು ಹಾಗೂ ಅವರ ಪೋಷಕರೇ ಕಾರಣ. ಈ 6 ಹುಡುಗಿಯರನ್ನು ನಿಯಂತ್ರಣ ಮಾಡಿದೇ ಸಂಘಟನೆಗಳು ಅವರಿಗೆ ಸಹಕಾರ ನೀಡಿತು ಎಂದು ಕಿಡಿಕಾರಿದ್ದಾರೆ.
ಯಾವುದೇ ಧರ್ಮ ಆಗಲಿ ಅವರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಬಂದಾಗ, ಇನ್ನೊಂದು ಧರ್ಮದವರು ಅದನ್ನು ಅತಿಯಾಗಿ ಮಾಡಿದಾಗ ಆಕ್ರೋಶಕ್ಕೆ ಕಾರಣವಾಗುತ್ತದೆ. ಇದು ಯಾರೂ ಸ್ಪ್ರೆಡ್ ಮಾಡಿದ್ದಲ್ಲ, ಇವರಿಗೆ ಮೆದುಳು ಇದಿದ್ದರೆ ಹೀಗೆ ಮಾಡುತ್ತಿರಲಿಲ್ಲ. ಅವರ ಮೆದುಳನ್ನು ಆ ಮತೀಯ ಸಂಘಟನೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್ಐ) ನಿಯಂತ್ರಣ ಮಾಡುವುದಕ್ಕೆ ಶುರುಮಾಡಿತು. ಅದರಿಂದ ಸಮಸ್ಯೆಯಾಗಿದೆ , ದೇಶದ್ರೋಹ ಸಂಘಟನೆಗಳೊಂದಿಗೆ ಸಂಪರ್ಕ ಇರುವವರು ನಿಯಂತ್ರಣ ಮಾಡಿದ್ದಕ್ಕೆ, ಮೆದುಳು ಅವರ ನಿಯಂತ್ರಣ ಇಲ್ಲದ್ದಕ್ಕೆ ಈ ಸಮಸ್ಯೆಯಾಯಿತು ಎಂದು ಹೇಳಿದ್ದಾರೆ.
- ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
- ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ
- ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ