ರಾಜ್ಯದಲ್ಲಿ ಸದ್ಯಕ್ಕೆ ಯಾವುದೇ ಟಫ್ ರೂಲ್ಸ್ ಜಾರಿಯಿಲ್ಲ . ಆದರೆ ಕೊರೊನಾ ನಿಯಂತ್ರಣಕ್ಕೆ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದರು.
ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿ ಹಾಗೂ ಪ್ರಮುಖ ಸಚಿವರ ಜೊತೆ ಮಹತ್ವದ ಮಾತುಕತೆ ನಡೆಸಿದರು.
ಈ ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯದಲ್ಲಿ ಸದ್ಯಕ್ಕೆ ಟಫ್ ರೂಲ್ಸ್ ಜಾರಿಯಿಲ್ಲ. ಅನವಶ್ಯಕವಾಗಿ ಯಾವುದೇ ನಿರ್ಬಂಧ ಹೇರಿಕೆ ಬೇಡ. ಅಗತ್ಯವಿರುವೆಡೆ ನಿರ್ಬಂಧ ಹೇರಿಕೆ ಅಗತ್ಯ ಎಂದು ಮೋದಿ ತಿಳಿಸಿದ್ದಾರೆ.
ಲಸಿಕೆ ನೀಡಲು ಶಾಲೆಗಳಲ್ಲಿ ಅಭಿಯಾನ ಮಾಡುತ್ತೇವೆ. ಟೆಸ್ಟ್, ಟ್ರೀಟ್, ಟ್ರ್ಯಾಕ್, ಲಸಿಕೆ ಅನುಸರಿಸಲು ಹೇಳಿದ್ದಾರೆ ಎಂದು ತಿಳಿಸಿದರು.
ಮೋದಿ ಹೇಳಿದ ನಾಲ್ಕು ಸೂತ್ರ :
ನಾಲ್ಕು ಸೂತ್ರಗಳನ್ನು ಅನುಸರಿಸಲು ಪ್ರಧಾನಿ ಮೋದಿ ಹೇಳಿದ್ದಾರೆ.
1) ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು
2) ವ್ಯಾಕ್ಸಿನೇಷನ್ ವೇಗ ಹೆಚ್ಚಿಸಲು ಸೂಚನೆ
3) ಸಾರ್ವಜನಿಕರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು.
4)ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಜೀವನ ನಡೆಸಬೇಕು. ಏರ್ಪೋರ್ಟ್ಗಳಲ್ಲಿ ಟೆಸ್ಟಿಂಗ್ ಹೆಚ್ಚಳ ಮಾಡುತ್ತೇವೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ