ಶಾಸಕ ಸಾ.ರಾ.ಮಹೇಶ್ ಪ್ರಚೋದನೆಯಿಂದ ಅವರ ಸಹಚರರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಮುಂದಾಗಿದ್ದಾರೆ ಎಂದು ಆರೋಪಿಸಿ RTI ಕಾರ್ಯಕರ್ತ ಗಂಗರಾಜು ಮೈಸೂರಿನಲ್ಲಿ ದೂರು ನೀಡಿದ ನಂತರ ಶಾಸಕರು ಲಕ್ಷ್ಮೀಪುರಂ ಠಾಣೆ ಮುಂದೆ ರಾತ್ರಿ ಪ್ರತಿಭಟನೆ ನಡೆಸಿದರು.
ದೂರು ದಾಖಲಾದ ಹಿನ್ನೆಲೆಯಲ್ಲಿ ಕೆರಳಿದ ಸಾ.ರಾ.ಮಹೇಶ್ ಪೊಲೀಸ್ ಠಾಣೆಯ ಮುಂದೆ ಶನಿವಾರ ತಡರಾತ್ರಿಯವರೆಗೂ ಪ್ರತಿಭಟನೆ ನಡೆಸಿದರು.
ಇದಕ್ಕೆ ಅವರ ಬೆಂಬಲಿಗರೂ ಸಾಥ್ ನೀಡಿದರು. ಬಳಿಕ ಪೊಲೀಸರ ಮನವೊಲಿಕೆ ನಂತರ ಧರಣಿ ವಾಪಸ್ ಪಡೆದರು.
ಮೈಸೂರು ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಅವರು ಮಾತನಾಡಿ ಆರ್ಟಿಐ ಕಾರ್ಯಕರ್ತ ಗಂಗರಾಜು ನೀಡಿದ ದೂರಿನನ್ವಯ ಎಫ್ಐಆರ್ ದಾಖಲು ಮಾಡಲಾಗಿದೆ. ಆದರೆ ಶಾಸಕರು ಕೆಲ ಆರೋಪಗಳನ್ನು ಮಾಡಿದ್ದಾರೆ. ಈ ಸಂಬಂಧ ತನಿಖೆ ಮಾಡಿಸುತ್ತೇವೆ ಎಂದು ಹೇಳಿ ಶಾಸಕರ ಮನ ಒಲಿಸಿದ ನಂತರ ಪ್ರತಿಭಟನೆ ಹಿಂದಕ್ಕೆ ಪಡೆದರು.