ಸೆಲ್ಫಿ ತೆಗೆಯಲು ಹೋಗಿ ಗೃಹಿಣಿಯೊಬ್ಬರು ನೀರುಪಾಲಾದ ಘಟನೆ ಪ್ರಸಿದ್ಧ ಯಾತ್ರ ಸ್ಥಳ ಶ್ರೀ ಕ್ಷೇತ್ರ ಸಂಗಮ ಬಳಿ ನಡೆದಿದೆ.
38 ವರ್ಷದ ಕವಿತಾ ಮೃತ ದುರ್ದೈವಿ.
ಚಾಮರಾಜನಗರ ಜಿಲ್ಲೆ ನಂಜದೇವನಪುರ ಗ್ರಾಮದ ನಿವಾಸಿಯಾದ ಮೃತ ಕವಿತಾ ಪತಿ ಗಿರೀಶ್ ಹಾಗೂ ಪುತ್ರಿಯೊಂದಿಗೆ ಸಂಗಮ ಕ್ಷೇತ್ರಕ್ಕೆ ಪೂಜೆ ಸಲ್ಲಿಸಲು ಆಗಮಿಸಿದ್ದರು.
ದೇವಾಲಯದ ಪ್ರವೇಶಕ್ಕೂ ಮುನ್ನ ಶ್ರೀಕ್ಷೇತ್ರ ಸಂಗಮದ ಮುಂಭಾಗದಲ್ಲೇ ಕಪಿಲಾ ನದಿ ದಡದಲ್ಲಿ ಕಾಲು ತೊಳೆಯಲು ತೆರಳಿದ್ದರು. ಈ ವೇಳೆ ನದಿ ದಡದಲ್ಲಿ ಸೆಲ್ಫಿ ತೆಗೆದುಕೊಳ್ಳುವ ವೇಳೆ ಕಪಿಲಾ ನದಿಗೆ ಜಾರಿ ಬಿದ್ದು ನೀರು ಪಾಲಾದರು.
ಇದನ್ನು ಓದಿ : ಅಭಿಷೇಕ್ ಅಂಬರೀಷ್ ನನ್ನು ಬಿಜೆಪಿಗೆ ಸೆಳೆಯಲು ಮೆಗಾ ಪ್ಲಾನ್ !
ಘಟನೆ ಸಂದರ್ಭದಲ್ಲಿ ಕವಿತಾ ಬಳಿ ಇದ್ದ ಪತಿ ಗಿರೀಶ್ ಹಾಗೂ ಪುತ್ರಿ ಅವರ ರಕ್ಷಣೆಗೆ ಯತ್ನಿಸಿದರು
ಸಾಧ್ಯವಾಗಲಿಲ್ಲ.
ಅಲ್ಲದೇ ಎಷ್ಟೇ ಕೂಗಾಡಿ ನೆರವು ನೀಡಲು ಮನವಿ ಮಾಡಿದರೂ ಯಾರು ನೆರವಿಗೆ ಬಾರದ ಪರಿಣಾಮ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು
ಮೃತ ಕವಿತ ಮೈಸೂರು ತಾಲೂಕಿನ ದೂರ ಗ್ರಾಮದ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಡಿ.ಬಿ ನಾಗರಾಜ್ ಅವರ ಪುತ್ರಿಯಾಗಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದ ದಳದಿಂದ ಮೃತ ದೇಹವನ್ನು ಹೊರತೆಗೆದು ಶವಗಾರಕ್ಕೆ ಕಳುಹಿಸಿದರು
ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು