ತಮಿಳುನಾಡು ಮತ್ತು ಕರ್ನಾಟಕ ಬಾಂಧವ್ಯ ಚೆನ್ನಾಗಿರಲು ಹಲವು ವಿಚಾರಗಳಿವೆ. ಆದರೆ ಕಾಂಗ್ರೆಸ್
ಎರಡೂ ರಾಜ್ಯಗಳನ್ನು ಒಡೆಯುವ ಪ್ರಯತ್ನ ಮಾಡುತ್ತಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕೋಲಾರದಲ್ಲಿ ಭಾನುವಾರ ಹೇಳಿದರು.
ಕೋಲಾರದ ಕೆಜಿಎಫ್ ನಗರದಲ್ಲಿ ಭಾನುವಾರ ಬಿಜೆಪಿ ಸಮಾವೇಶ ಮಾಡುವ ಮೂಲಕ ತಮಿಳು ಮತಗಳನ್ನು ಸೆಳೆಯಲು ಬಿಜೆಪಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮಕ್ಕೂ ಮುನ್ನ ಅಣ್ಣಾಮಲೈ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಮೇಕೆದಾಟು ವಿಚಾರದಲ್ಲಿ ತಮ್ಮ ಅಭಿಪ್ರಾಯ ಏನು ಎಂಬುದಕ್ಕೆ ಪ್ರತಿಕ್ರಿಯೆ ನೀಡಿದರು.
ತಮಿಳುನಾಡು ಮತ್ತು ಕರ್ನಾಟಕದ ಬಾಂಧವ್ಯಕ್ಕಾಗಿ ಹಲವು ವಿಚಾರಗಳಿವೆ. ವ್ಯಾಪಾರ, ಕೃಷಿ ಸೇರಿದಂತೆ ಹಲವು ವಿಚಾರಗಳಲ್ಲಿ ಒಬ್ಬರಿಗೊಬ್ಬರು ಚೆನ್ನಾಗಿಯೇ ಇದ್ದೇವೆ.
ಇದನ್ನು ಓದಿ: ರಾಜ್ಯದ ಹವಾಮಾನ ವರದಿ (Weather Report)
ತಮಿಳುನಾಡಿನ ಎಷ್ಟೋ ಮಂದಿ ಬೆಂಗಳೂರಿನ ಐಟಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ನಮ್ಮ ಬಾಂಧವ್ಯಕ್ಕೆ ಹಲವು ವಿಚಾರಗಳಿದ್ರು, ಕಾಂಗ್ರೆಸ್ ಜನರನ್ನು ಒಡೆಯುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಕಾವೇರಿ ವಿಚಾರವಾಗಿ ಜನರನ್ನು ಇಬ್ಭಾಗ ಮಾಡಿದರು ಮೇಕೆದಾಟು ವಿಚಾರ ಕೇಂದ್ರ ಸಚಿವರೊಬ್ಬರ ಕೈಯಲ್ಲಿದೆ. ಹಾಗಾಗಿ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಆಗಲಿದೆ. ಇದರಲ್ಲಿ ಯಾರಿಗೂ ತೊಂದರೆಯಾಗುವುದಿಲ್ಲ. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ನಡೆದುಕೊಳ್ಳಬೇಕು. ಕರ್ನಾಟಕ, ತಮಿಳುನಾಡಿನ ಮುಖ್ಯಮಂತ್ರಿಗಳು ಇದನ್ನೆ ಹೇಳಿದ್ದಾರೆ. ನಾನು ಯೋಜನೆ ಪರವೋ, ವಿರುದ್ಧವೋ ಎನ್ನುವುದು ಮುಖ್ಯವಲ್ಲ ಎಂದು ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು