ಜೂನಿಯರ್ ರವಿಚಂದ್ರನ್’ ಎಂದೇ ಖ್ಯಾತರಾಗಿದ್ದ ಆರ್ಕೆಸ್ಟ್ರಾ ಕಲಾವಿದ ಲಕ್ಷ್ಮೀನಾರಾಯಣ್ ಎಂಬವರು ವಿದ್ಯುತ್ ಶಾಕ್ನಿಂದಾಗಿ ಸಾವಿಗೀಡಾಗಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೆರೂರು ಗ್ರಾಮದ ನಿವಾಸಿ ಲಕ್ಷ್ಮೀನಾರಾಯಣ್ (35) ಸಾವಿಗೀಡಾದವರು.
ಸಂಪ್ಗೆ ನೀರು ತುಂಬಿಸಲು ಮೋಟರ್ ಆನ್ ಮಾಡುವ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ.ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸಂಗೀತ ಸಂಜೆ ಕಾರ್ಯಕ್ರಮದ ಕಲಾವಿದನಾಗಿ ಕೆಲಸ ಮಾಡುತ್ತಿದ್ದ ಲಕ್ಷ್ಮೀನಾರಾಯಣ್, ರವಿಚಂದ್ರನ್ ಅವರನ್ನು ಹೋಲುತ್ತಿದ್ದುದರಿಂದ ಮತ್ತು ಅವರಂತೆಯೇ ವೇಷಭೂಷಣ ಹೊಂದಿದ್ದರಿಂದ ಅವರು ‘ಜೂನಿಯರ್ ರವಿಚಂದ್ರನ್’ ಎಂದೇ ಕರೆಯಲ್ಪಡುತ್ತಿದ್ದರು.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ