January 29, 2026

Newsnap Kannada

The World at your finger tips!

UPPINAGADI

ಉದ್ಯೋಗವಿಲ್ಲದೇ ನೊಂದ ಪದವೀಧರ ಯುವತಿ ವಿಷ ಸೇವಿಸಿ ಆತ್ಮಹತ್ಯೆ

Spread the love

ಎಂಬಿಎ ಪದವೀಧರೆ ಯುವತಿಗೆ ಉದ್ಯೋಗ ಸಿಗದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದಲ್ಲಿ ನಡೆದಿದೆ. ಸಹನಾ (23) ವಿಷ ಸೇವಿಸಿ ಸಾವಿಗೆ ಶರಣಾದ ಯುವತಿ.

ಸಹನಾ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಮೂಲದ ಕಟ್ಟಿಂಗೇರಿಯ ಅಕ್ಕನ ಮನೆಗೆ ಬಂದಾಗ ವಿಷ ಸೇವನೆ ಮಾಡಿದ್ದಾಳೆ. ಉಡುಪಿಯ ಮಿಷನ್ ಆಸ್ಪತ್ರೆ, ಕೆಎಂಸಿ, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಹನಾ ಮೃತಪಟ್ಟಿದ್ದಾಳೆ.

ಅರ್ಹತೆಗೆ ತಕ್ಕ ಉದ್ಯೋಗ ಸಿಗಲಿಲ್ಲ ಎಂದು ವಿಷ ಸೇವಿಸಿದ್ದಾಳೆ ಎಂದು ಸಹನಾ ಪೋಷಕರು ಹೇಳಿದ್ದಾರೆ. ಒಂದು ವರ್ಷದ ಹಿಂದೆ ಮಂಗಳೂರಲ್ಲಿ ಎಂಬಿಎ ಮಾಡಿದ್ದಳು.

error: Content is protected !!