ಚಾಮರಾಜನಗರ ಪೂರ್ವ ಠಾಣೆಯಲ್ಲಿ ಪಿಎಸ್ಐ ಆಗಿದ್ದ ಡಿ.ಆರ್.ರವಿಕುಮಾರ್ ಅವರನ್ನು ಒಂದು ವಾರದಲ್ಲಿ ಮೂರು ಬಾರಿ ವರ್ಗಾವಣೆ ಮಾಡಲಾಗಿದೆ. ಆದರೆ, ವರ್ಗಾವಣೆ ಮಾಡಿದ ಸ್ಥಳಗಳಿಗೆ ಪಿಎಸ್ಐ ಮಾತ್ರ ರಿಪೋರ್ಟ್ ಮಾಡಿಕೊಂಡಿಲ್ಲ.
ಚಾಮರಾಜನಗರ ಪೂರ್ವ ಠಾಣೆಯಲ್ಲಿದ್ದ ಪಿಎಸ್ಐ ಡಿ.ಆರ್.ರವಿಕುಮಾರ್ ಎಂಬವರನ್ನು ಕಳೆದ 6 ರಂದು ಬೇಗೂರು ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಬಳಿಕ, 7 ರಂದು ವರ್ಗಾವಣೆ ಆದೇಶ ಮಾರ್ಪಡಿಸಿ ಬೇಗೂರು ಠಾಣೆಯಿಂದ ಗುಂಡ್ಲುಪೇಟೆ ಠಾಣೆ ಅಪರಾಧ ವಿಭಾಗದ ಪಿಎಸ್ಐ ಆಗಿ ಟ್ರಾನ್ಸ್ಫರ್ ಮಾಡಲಾಗಿದೆ.
ಇದನ್ನು ಓದಿ :ಅಶಿಸ್ತು, ಉದ್ಧಟತನ ತೋರಿದ ರಮ್ಮಾ -ಆರ್.ಧ್ರುವನಾರಾಯಣ್
ಇದಾದ ನಂತರ, ಕಳೆದ 11 ರಂದು ಗುಂಡ್ಲುಪೇಟೆ ಠಾಣೆಯಿಂದ ಕೊಡಗು ಜಿಲ್ಲೆಯ ವಿರಾಜಪೇಟೆ ಗ್ರಾಮಾಂತರ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಮಾಡಲಾದ ಸ್ಥಳಗಳಿಗೆ ಪಿಎಸ್ಐ ರಿಪೋರ್ಟ್ ಮಾಡಿಕೊಂಡಿರಲಿಲ್ಲ ಎಂದು ತಿಳಿದುಬಂದಿದೆ.
ಸದ್ಯ, ವಾರದಲ್ಲಿ 3 ಬಾರಿ ವರ್ಗಾವಣೆ ಭಾಗ್ಯ ಕಂಡಿದ್ದು ಸಾರ್ವಜನಿಕ ವಲಯದಲ್ಲಿ ಚರ್ಚೆ ಆಗುತ್ತಿದೆ. ಈ ವರ್ಗಾವಣೆಗೆ ನಿರ್ದಿಷ್ಟ ಕಾರಣ ಗೊತ್ತಾಗಿಲ್ಲ.
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
- ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ