ಕನ್ನಡ ಮಾಧ್ಯಮ ಶಾಲಾ ಪ್ರವೇಶ ಪಡೆಯುವ ಒಂದನೇ ತರಗತಿ ಮಕ್ಕಳಿಗೆ ಬೆಳ್ಳಿಯ ನಾಣ್ಯ ಕೊಡುವ ಜತೆಗೆ ಸರ್ಕಾರ ನೀಡುವ ಉಚಿತ ಕೊಡುಗೆಗಳನ್ನು ನೀಡಲಾಗುತ್ತಿದೆ.
ಎಲ್ಲ ಮಕ್ಕಳಿಗೂ ವರ್ಷಕ್ಕೆ ಆಗುವಷ್ಟು ಉಚಿತ ನೋಟ್ ಪುಸ್ತಕಗಳು, ಶಾಲಾಬ್ಯಾಗ್, ಲೇಖನ ಸಾಮಗ್ರಿ, ಜಾಮೆಟ್ರಿ, ಐಡೆಂಟಿಟಿ ಕಾರ್ಡ್, ಬೆಲ್ಟ್, ಹಾಗೂ 5, 6, 7ನೇ ತರಗತಿಯವರಿಗೆ ಉಚಿತ ಶೈಕ್ಷಣಿಕ ಪ್ರವಾಸ, ಸುತ್ತಮುತ್ತಲ ಹಳ್ಳಿಗಳಿಂದ ಬರುವ ಮಕ್ಕಳಿಗೆ ಉಚಿತ ವಾಹನ ವ್ಯವಸ್ಥೆ ನೀಡಲಾಗುತ್ತಿದೆ ಎಂದು ಪೋಸ್ಟರ್ನಲ್ಲಿ ತಿಳಿಸಲಾಗಿದೆ.
ಇದನ್ನು ಓದಿ : ಬಿಜೆಪಿ ಮುಖಂಡ ಅನಂತರಾಜು ಹನಿಟ್ರ್ಯಾಪ್ ಗೆ ಬಲಿ – ರೇಖಾ, ಸ್ಪಂದನ , ವಿನೋದ್ ಸಾವಿಗೆ ಕಾರಣ?
ಇದು ಶತಮಾನದ ಇತಿಹಾಸವಿರುವ ಮೇಲುಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆ ಹೆಸರಲ್ಲಿ ಪ್ರಕಟವಾಗಿರುವ ಪೋಸ್ಟರ್.
ಖಾಸಗಿ ಶಾಲೆಗಳ ಪೈಪೋಟಿಯ ನಡುವೆಯೂ ಈ ಶಾಲೆ ವಿಭಿನ್ನವಾಗಿ ನಿಲ್ಲುತ್ತಿದೆ.
ಈ ಶಾಲೆಯಲ್ಲಿ ಆಂಗ್ಲಮಾಧ್ಯಮದ 1ರಿಂದ 3ನೇ ಹಾಗೂ ಕನ್ನಡ ಮಾಧ್ಯಮದ 1ರಿಂದ 7 ತರಗತಿಗಳಿಗೆ ಪ್ರವೇಶ ಆರಂಭವಾಗಿದ್ದು, ಮಕ್ಕಳ ಪ್ರವೇಶಕ್ಕಾಗಿ ಸಾಮಾಜಿಕ ಜಾಲತಾಣದ ಮೂಲಕ ಒಂದು ವಿಶೇಷ ಪೋಸ್ಟರ್ ಹಂಚಿಕೊಳ್ಳಲಾಗಿದೆ.
ವಿದ್ಯಾರ್ಥಿಗಳನ್ನು ಸರ್ಕಾರಿ ಶಾಲೆಗಳತ್ತ ಬರಲು ಪ್ರೇರೇಪಿಸಲಾಗುತ್ತಿದೆ.
ಈಗಾಗಲೇ ಶಾಲೆಯು ಉತ್ತಮವಾದ ಡೆಸ್ಕ್ಗಳು, ಗ್ರಂಥಾಲಯದಲ್ಲಿ ಸಾವಿರಾರು ಪುಸ್ತಕಗಳು ಮತ್ತು ಕ್ರೀಡಾ ಸಾಮಗ್ರಿ ಹೊಂದಿದೆ. ಏಳು ವರ್ಷಗಳಿಂದ ಅನಿವಾಸಿ ಭಾರತೀಯ ಡಾ.ರಾಮಕೃಷ್ಣ ಅವರ ಸಹಕಾರದಲ್ಲಿ ಹಳ್ಳಿಯಿಂದ ಬರುವ ಮಕ್ಕಳಿಗೆ ವಾಹನ ಸೌಲಭ್ಯ ಕಲ್ಪಿಸಲಾಗುತ್ತಿದೆ.
ಈ ಎಲ್ಲಾ ಪ್ರಯತ್ನಗಳಿಂದಾಗಿ 2012ರಲ್ಲಿ 32 ಮಕ್ಕಳೊಂದಿಗೆ ಮುಚ್ಚುವ ಹಂತದಲ್ಲಿದ್ದ ಶಾಲೆ ಇದೀಗ 110 ಮಕ್ಕಳ ಕಲಿಯುತ್ತಿದ್ದಾರೆ ಎನ್ನುತ್ತಾರೆ ಶಿಕ್ಷಕರು.
ಈ ವರ್ಷದಿಂದ ಸ್ಮಾರ್ಟ್ ಕ್ಲಾಸ್ ಮತ್ತು ಕಂಪ್ಯೂಟರ್ ತರಗತಿಗಳು ಆರಂಭವಾಗಲಿದೆ. ಇಬ್ಬರು ಆಂಗ್ಲ ವಿಷಯ ತಜ್ಞರು ಸ್ಪೋಕನ್ ಇಂಗ್ಲಿಷ್ ತರಬೇತಿ ನೀಡಲಿದ್ದಾರೆ. ನಿಮ್ಮ ಮಕ್ಕಳನ್ನು ಯಾವುದೇ ಖರ್ಚಿಲ್ಲದೆ ಶತಮಾನದ ಶಾಲೆಗೆ ಸೇರಿಸಿ ಎಂದು ಎಸ್ಡಿಎಂಸಿ ಅಧ್ಯಕ್ಷ ದೇವರಾಜು ಮನವಿ ಮಾಡಿದ್ದಾರೆ.
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
- ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ