ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವ್ಯಕ್ಯಿಯೊಬ್ಬ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟಿರುವುದಾಗಿ ಇಂದು ಬೆಳಗಿನ ಜಾವ 3.30 ರ ಸುಮಾರಿಗೆ ದೂರವಾಣಿ ಕರೆ ಮಾಡಿದ್ದಾನೆ.
ಈ ಕರೆಯಿಂದಾಗಿ ವಿಮಾನ ನಿಲ್ದಾಣದಲ್ಲಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಠಿಯಾಗಿತ್ತು.ಈ ಬೆದರಿಕೆ ಕರೆ ಹಿನ್ನೆಲೆಯಲ್ಲಿ ನಿಲ್ದಾಣವನ್ನು ಸಂಪೂರ್ಣವಾಗಿ ತಪಾಸಣೆ ಮಾಡಿದ ನಂತರ ಇದೊಂದು ಹುಸಿ ಕರೆ ಎಂದು ಹೇಳಲಾಗಿದೆ.
ಇದನ್ನು ಓದಿ : 1988ರ ರಸ್ತೆ ಗಲಭೆ ಪ್ರಕರಣ: ನವಜೋತ್ ಸಿಧುಗೆ 1 ವರ್ಷ ಜೈಲು ಶಿಕ್ಷೆ ಸುಪ್ರೀಂ
ಬಾಂಬ್ ಬೆದರಿಕೆ ಕರೆ ಬಂದ ನಂತರ ಪ್ರಯಾಣಿಕರು ಆತಂಕದಲ್ಲಿ ಇದ್ದರು. ಪೊಲೀಸರು ಟ್ರಮಿನಲ್ ಸೇರಿದಂತೆ ಎಲ್ಲಾ ಕಡೆಗಳಲ್ಲಿ ಬಾಂಬ್ ಸ್ಕ್ವಾಡ್ ಕರೆಸಿ ತಪಾಸಣೆ ಮಾಡಿದ ಬಳಿಕ ಅದೊಂದು ಹುಸಿ ಕರೆ ಎಂದು ಹೇಳಲಾಯಿತು.