ಕುಟುಂಬ ರಾಜಕಾರಣವಿದ್ದಷ್ಟು ವಂಶ ವೃಕ್ಷ ಬೆಳೆಯುತ್ತದೆ. ಪರಸ್ಪರ ಹಿರಿಯರಿಗೆ ಗೌರವ ಸಿಗುತ್ತದೆ. ಮೋದಿ ಮಕ್ಕಳು ಮಾಡದಿದ್ದರೆ ಅದು ನನ್ನ ತಪ್ಪಾ? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ವ್ಯಂಗ್ಯವಾಡಿದರು
ಇದನ್ನು ಓದಿ:ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – 9 ಸಾವು, 20 ಮಂದಿಗೆ ಗಾಯ
ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಬ್ರಾಹಿಂ , ನಾವು ರೈತರು ಕಾಳು ಬೆಳೆದರೆ ಮಾರುವ ಕಾಳು ಬೇರೆ, ಬಿತ್ತನೆ ಕಾಳು ಬೇರೆ ಎಂದು ಇಟ್ಟುಕೊಳ್ಳುತ್ತೇವೆ. ಹಾಗೆಯೇ ಬಿಜೆಪಿ ಅವರಿಗೆ ಮೋದಿ ಅಭಿಮಾನವಿದ್ದರೆ ನಮಗೆ ದೇವೇಗೌಡ ಅಭಿಮಾನ. ಕುಟುಂಬ ರಾಜಕಾರಣದಿಂದ ಗೌರವ ಬೆಳೆಯುತ್ತದೆ ಎಂದರು
ಕಾಂಗ್ರೆಸ್ನಲ್ಲೂ ಕುಟುಂಬ ರಾಜಕಾರಣ ಇತ್ತು. ಇಂದಿರಾಗಾಂಧಿ ನಂತರ, ರಾಜೀವ್ಗಾಂಧಿ, ಸೋನಿಯಾಗಾಂಧಿ, ರಾಹುಲ್ ಗಾಂಧಿ ಅಧಿಕಾರಕ್ಕೆ ಬರಲಿಲ್ಲವೇ? ಈಗ ಮೋದಿ ಅವರು ಮಕ್ಕಳು ಮಾಡದೇ ಇದ್ರೆ ಅದು ನನ್ನ ತಪ್ಪಾ ಅಂದು ಹಾಸ್ಯ ಮಾಡಿದರು
ಪಠ್ಯಪುಸ್ತಕ ವಿಚಾರದಲ್ಲಿ ಬಸವಣ್ಣ, ಕುವೆಂಪು ಸೇರಿದಂತೆ ಅನೇಕರ ವಿಚಾರದಲ್ಲಿ ಅಪಮಾನ ನಡೆಯುತ್ತಿದೆ. ಹೀಗಿದ್ದೂ ಬೊಮ್ಮಾಯಿ ಯಾಕೆ ಈ ತಪ್ಪು ಕೆಲಸ ಮಾಡುತ್ತಿದ್ದೀರಿ? ಬಸವ ಪರಂಪರೆಯಲ್ಲಿ ಹುಟ್ಟಿ ಯಾಕೆ ಈ ಅವಮಾನ ಮಾಡುತ್ತಿದ್ದೀರಿ? ಈ ಬಗ್ಗೆ ಸಮಿತಿ ಮಾಡಿ ಅವರಿಗೆ ಶಿಕ್ಷೆಗೊಳಪಡಿಸಬೇಕು? ಎಂದು ಆಗ್ರಹಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಕರ್ನಾಟಕದ ಬಜೆಟ್ ದೇಶಕ್ಕೆ ಮಾದರಿ: ಡಿ.ಕೆ. ಶಿವಕುಮಾರ್
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ