ಟಿಕೆಟ್ ಇಲ್ಲದೇ ರೈಲಿನ ಮೂಲಕ ಮುಂಬೈನಿಂದ ಮಂಗಳೂರಿಗೆ ಸಾಗಿಸುತ್ತಿದ್ದ ದಾಖಲೆ ರಹಿತ ಎರಡು ಕೋಟಿ ಹಣವನ್ನು ಕಾರವಾರದ ರೈಲ್ವೆ ಪೊಲೀಸರು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ.
ಇದನ್ನು ಓದಿ –ಪೋಷಕರೇ ನನ್ನನ್ನು ಹತ್ಯೆ ಮಾಡುತ್ತಾರೆ – ಶಾಲಿನಿ ಪೊಲೀಸರಿಗೆ ಬರೆದ ಪತ್ರ, ಆಡಿಯೋ ಲಭ್ಯ
ರಾಜಸ್ಥಾನ ಮೂಲದ ಮನೋಹರ್ ಸಿಂಗ್ ಅಲಿಯಾಸ್ ಚೇನ್ ಸಿಂಗ್ ಆರೋಪಿ. ಮಂಗಳೂರು ಎಕ್ಸ್ಪ್ರೆಸ್ ರೈಲಿನಲ್ಲಿ ಟಿಕೆಟ್ ಪಡೆಯದೆ ಪ್ರಯಾಣಿಸುತಿದ್ದ ಮನೋಹರ್ ಸಿಂಗ್ನನ್ನು ಕಾರವಾರದ ಬಳಿ ರೈಲ್ವೆ ಪೊಲೀಸರು ದಂಡ ವಿಧಿಸಿದ್ದರು.
ಈ ವೇಳೆ ಅನುಮಾನಗೊಂಡ ರೈಲ್ವೆ ಪೊಲೀಸರು ಈತನ ಬಳಿ ಇದ್ದ ಬ್ಯಾಗ್ ಅನ್ನು ತಪಾಸಣೆಗೆ ಒಳಪಡಿಸಿದಾಗ ಈತನ ಬಳಿ ಇದ್ದ ಬ್ಯಾಗಿನಲ್ಲಿ 100 ಬಂಡಲ್ನ ಎರಡು ಕೋಟಿ ಹಣ ಪತ್ತೆಯಾಗಿದೆ.
ಮನೋಹರ್ ಸಿಂಗ್ ಮುಂಬೈನ ಭರತ್ ಬಾಯ್ ಅಲಿಯಾಸ್ ಪಿಂಟೊ ಎಂಬುವರ ಬಳಿ 15 ಸಾವಿರಕ್ಕೆ ಕೆಲಸ ಮಾಡುತಿದ್ದ.
ಮನೋಹರ್ ಸಿಂಗ್ ತನ್ನ ಮಾಲೀಕನಿಂದ ಬ್ಯಾಗ್ ಪಡೆದು ಮಂಗಳೂರಿನಲ್ಲಿ ರಾಜು ಎಂಬವರಿಗೆ ತಲುಪಿಸಲು ಮುಂಬೈನಿಂದ ಮಂಗಳೂರಿಗೆ ಹೊರಟಿದ್ದಾಗಿ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ರೈಲ್ವೆ ಪೊಲೀಸರು ಆರೋಪಿಯನ್ನು ಕಾರವಾರ ಗ್ರಾಮಾಂತರ ಠಾಣೆ ಪೊಲೀಸರ ವಶಕ್ಕೆ ನೀಡಿದ್ದಾರೆ.
- ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ