ಮಂತ್ರಾಲಯ ರಾಘವೇಂದ್ರ ಸ್ವಾಮಿ ದರ್ಶನಕ್ಕೆ ಬಂದಿದ್ದ ಭಕ್ತರ ಕಾರಿಗೆ ಬೆಂಕಿ ಹೊತ್ತಿಕೊಂಡು ಧಗ ಧಗ ಉರಿದು ಸುಟ್ಟು ಹೋದ ಘಟನೆ ರಾಯಚೂರಿನ ಮಡ್ಡಿಪೇಟೆಯಲ್ಲಿ ತಿಪ್ಪೆಯ ಬಳಿ ನಿಲ್ಲಿಸಿದ್ದಾಗ ನಡೆದಿದೆ.
ರೈತ ಮುಖಂಡ ಡಾ. ವಿಜಯಾನಂದ ಸ್ವಾಮಿ ಅವರಿಗೆ ಸೇರಿದ ಕಾರು ಬೆಳಗಿನ ಜಾವ ಬೆಂಕಿಗಾಹುತಿಯಾಗಿದೆ. ಇದನ್ನು ಓದಿ – ಬೀದರ್-ಬೆಂಗಳೂರು ಮಧ್ಯೆ ಸಂಚರಿಸಲಿದೆ ಏರ್ ವಿಮಾನ
ಶ್ರೀ ರಾಘವೇಂದ್ರ ಸ್ವಾಮಿ ದರ್ಶನಕ್ಕಾಗಿ ಮಂತ್ರಾಲಯಕ್ಕೆ ಹೋಗಲು ಬೆಂಗಳೂರಿನಿಂದ ರಾಯಚೂರಿನ ಮಡ್ಡಿಪೇಟೆಯಲ್ಲಿರುವ ಸಹೋದರನ ಮನೆಗೆ ಬಂದಿದ್ದರು.
ಮನೆ ಹೊರಗೆ ಪಾರ್ಕ್ ಮಾಡಿದ್ದ ಕಾರು ಬೆಳಗಾಗುವಷ್ಟರಲ್ಲಿ ಸುಟ್ಟು ಕರಕಲಾಗಿದೆ. ತಿಪ್ಪೆಗೆ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿ ಕಾರಿಗೆ ತಗುಲಿರಬಹುದು ಅಂತ ಶಂಕಿಸಲಾಗಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿ ಸತತ ಅರ್ಧ ಗಂಟೆಕಾಲ ಬೆಂಕಿ ನಂದಿಸಿದೆ.
ನೇತಾಜಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!
- ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು
- Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ
- ಪ್ರಜ್ವಲ್ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್ ಈಶ್ವರಪ್ಪ
- ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ
- ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ