ಕೊರೋನಾ, ಜಲಪ್ರಳಯ, ಸಾವು-ನೋವು ವಿಪರೀತ ಹಾಗೂ ಮತೀಯ ಗಲಭೆಗಳೂ ಕೂಡ ಹೆಚ್ಚಾಗಲಿವೆ ಎಂದು ಕೋಡಿಮಠ ಶ್ರೀ ಗಳು ಭವಿಷ್ಯ ನುಡಿದ್ದಾರೆ.
ಕೋವಿಡ್ ಇನ್ನೂ ಒಂದೂವರೆ ವರ್ಷದ ನಂತರ ಕಡಿಮೆ ಆಗಲಿದೆ. ಕೊರೋನಾ ಹೋಗುವ ಸಂದರ್ಭದಲ್ಲಿ ವಿಪರೀತ ಕಷ್ಟ ಕೊಟ್ಟು ಹೋಗಲಿದೆ. ಈಗಿನಿಂದಲೇ ಎಚ್ಚರಿಕೆ ವಹಿಸಬೇಕು ಎಂಬುದಾಗಿ ಭವಿಷ್ಯ ನುಡಿದರು.
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು, ರಾಜ್ಯದಲ್ಲಿ ಮಳೆ-ಬೆಳೆ ಕಂಡಮಂಡಲವಾಗಲಿದೆ. ಗುಡುಗು, ಸಿಡಿಲು, ಮಿಂಚು ಹೆಚ್ಚಾಗಲಿದೆ. ಪ್ರಕೃತಿ ಮೇಲೆ ಹಾವಳಿ ಮಾಡುತ್ತೆ. ಮಲೆನಾಡು, ಬಯಲಾಗಲಿದೆ. ಬಯಲು ಮಲೆನಾಡು ಆಗಲಿದೆ ಎಂದಿದ್ದಾರೆ.
ಇದನ್ನು ಓದಿ – ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ – ಸುಳಿವು ನೀಡಿದ ಸಚಿವ ಅಶ್ವಥ್ ನಾರಾಯಣ್
ದೊಡ್ಡ ದೊಡ್ಡ ನಗರಕ್ಕೆ ಮಳೆಯಿಂದ ಹಾನಿ ಉಂಟಾಗಲಿದೆ. ಮುಂಗಾರು ಮಳೆ ಇನ್ನೂ ಹೆಚ್ಚಾಗಲಿದೆ. ಹಿಂಗಾರಿನಲ್ಲಿ ಅಕಾಲಿಕ ಮಳೆ ಆಗುವ ಲಕ್ಷಣಗಳಿವೆ. ಮತೀಯ ಗಲಭೆ ಹೆಚ್ಚಾಗಲಿದೆ. ಸಾವು-ನೋವುಗಳು ಉಂಟಾಗಲಿವೆ ಎಂಬುದಾಗಿ ತಿಳಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು