ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಯುವಕನೊಬ್ಬ ರಾಜಕಾಲುವೆಯಲ್ಲಿ ಕೊಚ್ಚಿಹೋಗಿದ್ದಾನೆ. ಈ ಘಟನೆ ಕೆ.ಆರ್.ಪುರದ ಗಾಯತ್ರಿ ಬಡಾವಣೆಯಲ್ಲಿ ನಡೆದಿದೆ. ಶಿವಮೊಗ್ಗ ಮೂಲದ ಮಿಥುನ್ ಸಾಗರ್ (24) ಕೊಚ್ಚಿ ಹೋಗಿರುವ ಯುವಕ.
ನಿನ್ನೆ ರಾತ್ರಿ 7 ಗಂಟೆಯಿಂದ ಸುರಿದ ಮಳೆಯಿಂದಾಗಿ ರಾಜಕಾಲುವೆ ತುಂಬಿ ಹರಿಯುತ್ತಿತ್ತು. ರಾತ್ರಿ 12 ಗಂಟೆ ಸುಮಾರಿಗೆ ಮಿಥುನ್ ವಾಸವಿದ್ದ ಮನೆಯ ಸುತ್ತ ಸಂಪೂರ್ಣವಾಗಿ ನೀರು ಅವರಿಸಿಕೊಂಡಿತ್ತು. ಅದಾದ ಕೆಲವು ಹೊತ್ತುಗಳಲ್ಲಿ ಆ ಕಟ್ಟಡದ ಬಳಿಯಿದ್ದ ಕಾಂಪೌಂಡ್ ಬಿದ್ದಿದೆ. ಏಕಾಏಕಿ ನೀರು ನುಗ್ಗುತ್ತಿದ್ದಂತೆಯೇ ಯುವಕ ಮಿಥುನ್ ಬೈಕ್ ಕೊಚ್ಚಿಕೊಂಡು ಹೋಗಲು ಶುರುವಾಗಿದೆ. ಆಗ ಯುವಕ ಬೈಕ್ ಹಿಡಿದಿಟ್ಟುಕೊಳ್ಳಲು ಮುಂದಾಗಿದ್ದಾನೆ. ಇದೇ ವೇಳೆ ನೀರಿನ ರಭಸಕ್ಕೆ ಮಿಥುನ್ ಕೊಚ್ಚಿಹೋಗಿದ್ದಾನೆ.
ಇದನ್ನು ಓದಿ – ಸೇನೆಗೆ ಪುಂಡರ ಅಗತ್ಯವಿಲ್ಲ, ರೈಲು ಸುಡುವವರು ಸೇನೆಗೆ ಸೂಕ್ತರಲ್ಲ: ಮಾಜಿ ಜನರಲ್ ವಿಪಿ ಮಲೀಕ್
ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಕೆಆರ್ಪುರಂ ಪೊಲೀಸರು ಭೇಟಿ ನೀಡಿ ಶೋಧಕಾರ್ಯ ಮುಂದುವರಿಸಿದ್ದಾರೆ. ಇದೀಗ ಚೀಫ್ ಫೈರ್ ಆಫೀಸರ್ ರವಿಪ್ರಸಾದ್ ನೇತೃತ್ವದಲ್ಲಿ ಮಿಥುನ್ಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಜೊತೆ ಎಸ್ಡಿಆರ್ಎಫ್, ಸ್ಥಳೀಯ ಪೊಲೀಸರು ಹಾಗೂ ಸ್ಥಳೀಯರು ಸಾಥ್ ನೀಡುತ್ತಿದ್ದಾರೆ. ಯುವಕ ರಾಜಕಾಲುವೆಗೆ ಬಿದ್ದ ಸ್ಥಳದಿಂದ ಸುಮಾರು ಎರಡು ಕಿ ಮಿ ತನಕ ಹುಡುಕಾಟ ನಡೆಸಲಾಗಿದೆ ಎಲ್ಲಿಯೂ ಪತ್ತೆಯಾಗಿಲ್ಲ.
- ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು
- Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ
- ಪ್ರಜ್ವಲ್ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್ ಈಶ್ವರಪ್ಪ
- ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ
- ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ