ಅಗ್ನಿಪಥ ಯೋಜನೆ ವಿರೋಧಿಸಿ ಸಿಕಂದರಾಬಾದ್ನಲ್ಲಿ ಉಂಟಾಗಿದ್ದ ಗಲಭೆಯ ಹಿಂದಿನ ಪ್ರಮುಖ ಆರೋಪಿಯನ್ನು ಭಾನುವಾರ ಬಂಧಿಸಲಾಗಿದೆ.
ಆವುಲ ಸುಬ್ಬಾ ರಾವ್ನನ್ನು ಬಂಧಿಸಲಾಗಿದೆ. ಈತ ಮಾಜಿ ಸೈನಿಕ. ಅಗ್ನಿಪಥ ಯೋಜನೆ ಖಂಡಿಸಿ ತೆಲಂಗಾಣದ ಸಿಕಂದರಾಬಾದ್ ರೈಲ್ವೇ ನಿಲ್ದಾಣದಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.ಈ ಹಿಂಸಾಚಾರದ ರೂವಾರಿ ಈತನೇ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿ – ದ್ವಿತೀಯ PUC ಪರೀಕ್ಷೆ: ಕೊಪ್ಪಳದ ಅಪ್ಪ-ಮಗ ಪಾಸ್: ತಂದೆಗೆ ಹೆಚ್ಚು ಅಂಕ
ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಮೃತಪಟ್ಟಿದ್ದ. ಈ ಎಲ್ಲಾ ಘಟನೆಗೂ ಈತನೇ ಕಾರಣ ಎಂದು ತಿಳಿದುಬಂದಿದೆ.
ವಾಟ್ಸಾಪ್ ಮೂಲಕ ಮೆಸೇಜ್ ಕಳುಹಿಸಿ ಹೆಚ್ಚು ಜನರನ್ನು ಸೇರಿಸಿ ಗಲಭೆ ಸೃಷ್ಟಿಸಲು ಈತ ಪ್ರಚೋದನೆ ನೀಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಬಂಧಿತ ರಾವ್ ಆಂದ್ರಪ್ರದೇಶದ ಪ್ರಕಾಶಮ್ ಜಿಲ್ಲೆಯವನು.
ಕಳೆದ ಕೆಲವು ವರ್ಷಗಳಿಂದ ನರಸರಾವ್ಪೇಟೆ, ಹೈದರಾಬಾದ್ ಮತ್ತು ಸೇರಿದಂತೆ 7 ಕಡೆ ಸೇನಾ ಆಕಾಂಕ್ಷಿಗಳಿಗಾಗಿ ತರಬೇತಿ ಶಾಖೆಯನ್ನು ನಡೆಸುತ್ತಿದ್ದಾರೆ.
ಪ್ರಕರಣ ಸಂಬಂಧಿಸಿದಂತೆ ಅದೊನಿ, ಕರ್ನೂಲ್, ಗುಂಟೂರ್, ನೆಲ್ಲೂರು, ವಿಶಾಖಪಟ್ಟಣಂ ಮತ್ತು ಯಲಮಂಚಿಲಿಯಲ್ಲಿ ಹಲವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ