ಬೆಳಗಾವಿಯ ಕುವೆಂಪು ನಗರದಲ್ಲಿ 2015 ರ ಆಗಸ್ಟ್ ನಲ್ಲಿ ತಾಯಿ-ಇಬ್ಬರು ಮಕ್ಕಳ ತ್ರಿವಳಿ ಕಗ್ಗೊಲೆ ಪ್ರಕರಣದಲ್ಲಿ ಸ್ಯಾಕ್ಷಾಧಾರಗಳ ಕೊರತೆಯಿಂದ ಧಾರವಾಡ ಹೈಕೋರ್ಟ್ ಪೀಠ ಆರೋಪಿಯನ್ನು ಖಲಾಸೆ ಮಾಡಿದೆ.

ಇದನ್ನು ಓದಿ –ಮಂಡ್ಯ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ : ಎರಡು ದಿನ ಕಾಳಿಂಗನಹಳ್ಳಿ ಗ್ರಾಮ ವಾಸ್ತವ್ಯ ಅಂತ್ಯ
ಬೆಳಗಾವಿಯ ಕುವೆಂಪು ನಗರದಲ್ಲಿ 2015ರ ಆಗಸ್ಟ್ 16ರಂದು ನಸುಕಿನ ಜಾವ ತಾಯಿ, ಇಬ್ಬರು ಮಕ್ಕಳು ಸೇರಿ ಮೂವರ ಬರ್ಬರ ಹತ್ಯೆಯಾಗಿತ್ತು.
ಘಟನೆಯಲ್ಲಿ ರೀನಾ ಮಾಲಗತ್ತಿ, ಆದಿತ್ಯ ಮಾಲಗತ್ತಿ, ಸಾಹಿತ್ಯ ಮಾಲಗತ್ತಿ ಕೊಲೆಯಾಗಿತ್ತು. ಕೊಲೆಯಾದ 24 ಗಂಟೆಯಲ್ಲೇ ಆರೋಪಿ ಪ್ರವೀಣ್ ಭಟ್ ಎಂಬಾತನನ್ನು ಬಂಧಿಸಿದ್ದ ಬೆಳಗಾವಿ ಎಪಿಎಂಸಿ ಪೊಲೀಸರು ತನಿಖೆ ನಡೆಸಿ ಬೆಳಗಾವಿ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ವಾದ ಆಲಿಸಿದ ಬೆಳಗಾವಿ ಕೋರ್ಟ್ 2018ರ ಏಪ್ರಿಲ್ 16ರಂದು ಪ್ರವೀಣ್ ಭಟ್ಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಆ ಬಳಿಕ ತೀರ್ಪು ಪ್ರಶ್ನಿಸಿ ಆರೋಪಿ ಪರ ವಕೀಲರು ಹೈಕೊರ್ಟ್ ಮೆಟ್ಟಿಲೇರಿದ್ದರು.
ಈಗ ಧಾರವಾಡ ಹೈಕೋರ್ಟ್ ಪೀಠ ಸಾಕ್ಷಿಗಳ ಕೊರತೆ ಹಿನ್ನೆಲೆ ಆರೋಪಿ ಪ್ರವೀಣ್ ಭಟ್ ನಿರ್ದೋಷಿ ಎಂದು ತೀರ್ಪು ನೀಡಿದೆ.
ತ್ರಿವಳಿ ಕೊಲೆಗೆ ರೀನಾ ಹಾಗೂ ಪ್ರವೀಣ್ ಭಟ್ ನಡುವಿನ ಅನೈತಿಕ ಸಂಬಂಧವೇ ಕಾರಣ ಎನ್ನಲಾಗಿತ್ತು. ಆರೋಪಿ ಪರವಾಗಿ ನ್ಯಾಯವಾದಿ ಪ್ರವೀಣ್ ಕರೋಶಿ ವಾದ ಮಂಡಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು