ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯ ಬ್ರಹ್ಮನಗರ ಪ್ರದೇಶದಲ್ಲಿ ಮದುವೆ ಮೆರವಣಿಗೆ ವೇಳೆ ವರ ಖುಷಿಗೆ ಗುಂಡು ಹಾರಿಸಿದ್ದು, ಆ ಗುಂಡು ಆತನ ಸ್ನೇಹಿತನಿಗೆ ತಗುಲಿ ಸಾವನ್ನಪ್ಪಿದ್ದಾರೆ.
ಇದನ್ನು ಓದಿ –ಬೆಳಗಾವಿಯ ರೀನಾ, ಇಬ್ಬರು ಮಕ್ಕಳ ಕೊಲೆ ಆರೋಪಿ ಪ್ರವೀಣ್ ಭಟ್ ನಿರ್ದೋಷಿ : ಹೈಕೋರ್ಟ್
ವರನನ್ನು ಮನೀಶ್ ಮಧೇಶಿಯಾ ಎಂದು ಹಾಗೂ ಮೃತ ಸ್ನೇಹಿತನನ್ನು ಬಾಬು ಲಾಲ್ ಯಾದವ್ ಎಂದು ಗುರುತಿಸಲಾಗಿದೆ. ವರ ಮತ್ತು ಮೃತ ಸ್ನೇಹಿತ ಯೋಧನಾಗಿದ್ದು, ಇವರಿಬ್ಬರು ಸ್ನೇಹಿತರು.
ವರ ಮನೀಶ್ ಮಧೇಶಿಯಾ ರಥದಲ್ಲಿ ಮೆರವಣಿಗೆ ಹೋಗುತ್ತಿದ್ದಾಗ ಗುಂಡು ಹಾರಿಸಿದ್ದಾನೆ. ಆ ಗುಂಡು ಸ್ನೇಹಿತ ಬಾಬು ಲಾಲ್ ಯಾದವ್ ಅವರಿಗೆ ತಗುಲಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಗುಂಡು ಹಾರಿಸಿದ ತಕ್ಷಣ, ಯಾದವ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಚಿಕಿತ್ಸೆ ವೇಳೆ ಅವರು ಸಾವನ್ನಪ್ಪಿದರು ಎಂದು ಸೋನ್ಭದ್ರಾ ಪೊಲೀಸ್ ವರಿಷ್ಠಾಧಿಕಾರಿ ಅಮರೇಂದ್ರ ಪ್ರತಾಪ್ ಸಿಂಗ್ ಹೇಳಿದ್ದಾರೆ.
ಸ್ನೇಹಿತ ಬಾಬು ಲಾಲ್ ಕುಟುಂಬದವರು ಈ ಸಂಬಂಧ ವರನ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ವರನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು. ಗುಂಡಿನ ದಾಳಿಗೆ ಬಳಸಿದ್ದ ಬಂದೂಕನ್ನೂ ವಶಪಡಿಸಿಕೊಳ್ಳಲಾಗಿದೆ.
ಮದುವೆ ಮತ್ತು ದೇಗುಲ ಸೇರಿದಂತೆ ಯಾವುದೇ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಲೈಸನ್ಸ್ ಪಡೆದ ಬಂದೂಕುಗಳಿದ್ದರೂ ಸಹ ಸಂಭ್ರಮದಿಂದ ಗುಂಡು ಹಾರಿಸುವುದು ಭಾರತದಲ್ಲಿ ಕ್ರಿಮಿನಲ್ ಅಪರಾಧವಾಗಿದೆ.
- ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ