ಕಳೆದ ಬಾರಿ ಮುಂಗಾರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಚಾಮುಂಡಿಬೆಟ್ಟದ ನಂದಿ ರಸ್ತೆ ಕುಸಿದಿತ್ತು. ಇದರ ದುರಸ್ತಿ ಕಾರ್ಯ ಈವರೆಗೂ ಆರಂಭವಾಗಿಲ್ಲ. ಈಗಾಗಲೇ ಮುಂಗಾರು ರಾಜ್ಯ ಪ್ರವೇಶಿಸಿದೆ. ಹೀಗಾಗಿ ಕುಸಿತ ಉಂಟಾದ ರಸ್ತೆ ಭಾಗ ಮತ್ತಷ್ಟು ಹಾನಿಗೀಡಾಗುವ ಆತಂಕ ಎದುರಾಗಿದೆ.
ಮಳೆಗಾಲ ಆರಂಭವಾಗಿರುವುದರಿಂದ ಭೂ ಕುಸಿತ ಉಂಟಾದ ಜಾಗದಲ್ಲಿ ಮತ್ತೆ ಭೂಮಿ ಬಿರುಕು ಬಿಟ್ಟು ಮಣ್ಣಿನ ಕುಸಿತವಾಗಬಹುದು. ಇದರಿಂದ ರಸ್ತೆ ದುರಸ್ತಿ ಮತ್ತಷ್ಟು ಜಟಿಲವಾಗುವ ಆತಂಕ ಎದುರಾಗಿದೆ.ಇದನ್ನು ಓದಿ –ಕೆ ಆರ್ ಪೇಟೆ ಈಶ್ವರನ ದೇವಸ್ಥಾನದಲ್ಲಿ ಶುದ್ದೀಕರಣ ಆರಂಭ – ನಾಳೆ ಪುನರ್ ಪ್ರತಿಷ್ಠಾಪನೆ
ಮತ್ತಷ್ಟು ಬಿರುಕು
ಕುಸಿತಗೊಂಡಿರುವ ರಸ್ತೆ ಸಮೀಪ ಮತ್ತಷ್ಟು ಕಡೆ ಬಿರುಕು ಕಾಣಿಸಿಕೊಂಡಿದೆ. ಈಗಾಗಲೇ ಎರಡು ಕಡೆ ಭಾರಿ ಪ್ರಮಾಣದ ಭೂ ಕುಸಿತವಾಗಿದೆ.

ಕುಸಿತಗೊಂಡಿರುವ ಜಾಗದಲ್ಲಿ ಶೀಘ್ರ ದುರಸ್ತಿ ಕಾರ್ಯ ಕೈಗೊಳ್ಳದ ಪರಿಣಾಮ ಭಾರಿ ಪ್ರಮಾಣದ ಮಣ್ಣು ಸವೆಯುತ್ತಿದೆ. ಇದರ ಜತೆಗೆ ಕುಸಿದ ಭಾಗದ ಸಮೀಪ ಎರಡು-ಮೂರು ಕಡೆ 50 ಮೀಟರ್ಗಳಷ್ಟು ಬಿರುಕು ಬಿಟ್ಟಿದೆ. ಇದು ಈ ಬಾರಿ ಸುರಿಯುವ ಮಳೆಯಲ್ಲಿ ಕುಸಿಯುವ ಎಲ್ಲಾ ಸಾಧ್ಯತೆ ಇದೆ, ಹೀಗಾಗಿ ಬೆಟ್ಟಕ್ಕೆ ಮತ್ತಷ್ಟು ಘಾಸಿಯಾಗುವ ಮುನ್ನ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಿದೆ.
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
- ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
- ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ