March 11, 2026

Newsnap Kannada

The World at your finger tips!

harsha

ಹರ್ಷ ಕೊಲೆ ಪ್ರಕರಣ – ಶಿವಮೊಗ್ಗದಲ್ಲಿ NIA ಅಧಿಕಾರಿಗಳ ದಾಳಿ : ಹಲವರ ವಿಚಾರಣೆ

Spread the love

ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಗುರುವಾರ ಬೆಳಗ್ಗೆ ಜಿಲ್ಲೆ ಹಲವೆಡೆ ಕ್ಷಿಪ್ರ ದಾಳಿ ನಡೆಸಿದ್ದಾರೆ.

ಶಿವಮೊಗ್ಗಕ್ಕೆ ಎನ್‌ಐಎ ಅಧಿಕಾರಿಗಳು ನಿನ್ನೆ ರಾತ್ರಿ ಬಂದಿಳಿದು ನಾಲ್ಕು ರಾಜ್ಯಗಳ ಹಿರಿಯ ಅಧಿಕಾರಿಗಳನ್ನೊಳಗೊಂಡ ತಂಡ ಜಿಲ್ಲೆಗೆ ಆಗಮಿಸಿದೆ. ಜಿಲ್ಲೆಯ ಅಧಿಕಾರಿಗಳನ್ನೂ ಸೇರಿ ಒಟ್ಟು 90 ಅಧಿಕಾರಿಗಳಿಂದ ದಾಳಿ ನಡೆದಿದೆ.

ಗುರುವಾರ ಬೆಳಗ್ಗೆ ಐದು ಗಂಟೆಗೆ ದಾಳಿ ಆರಂಭವಾಯಿತು. ಶಿವಮೊಗ್ಗ ಜಿಲ್ಲೆಯಲ್ಲಿ 13 ಕಡೆ ದಾಳಿ ನಡೆಸಿ ವಿಚಾರಣೆ ಮಾಡಲಾಯಿತು. ಬೆಳಗ್ಗೆ 10 ಗಂಟೆಯೊಳಗೆ ವಿಚಾರಣೆ ಮುಗಿಸಿ ವಾಪಸ್ ಆಗಿದ್ದಾರೆ.

ಮದರಸಾಗಳಲ್ಲಿ ಮಕ್ಕಳಿಗೆ ರುಂಡ ಕತ್ತರಿಸುವ ಕಾನೂನನ್ನೇ ಬೋಧ – ಆರಿಫ್ ಖಾನ್ ಕಿಡಿ

ಹರ್ಷ ಕೊಲೆ ಪ್ರಕರಣದಲ್ಲಿ ಹೆಸರು ಕೇಳಿ ಬಂದ ಆರೋಪಿಗಳು ಹಾಗೂ ಅವರ ಸಂಬಂಧಿಕರ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ. ಇದುವರೆಗೆ ಒಟ್ಟು 450 ಮಂದಿಯನ್ನು ಎನ್‌ಐಎ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

error: Content is protected !!